ಹಿಂಸಾಚಾರದಲ್ಲಿ ಬೆಂಕಿನಿಂದ ಹೊತ್ತಿ ಉರಿಯುತ್ತಿರುವ ವಾಹನಗಳು 
ದೇಶ

ಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!

ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೌರಾ: ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾಜಿಪಾರಾ ಪ್ರದೇಶದ ಮೂಲಕ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ಹಲವಾರು ಅಂಗಡಿಗಳು ಮತ್ತು ಆಟೋ- ರಿಕ್ಷಾಗಳನ್ನು ಸುಟ್ಟು ಹಾಕಲಾಗಿದೆ ಮತ್ತು ಕೆಲವು ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಮನವಮಿ ಮೆರವಣಿಗೆಯಲ್ಲಿ ಕೋಮು ಘರ್ಷಣೆ ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT