ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ವೇಳೆ ಹಿಂಸಾಚಾರ ನಡೆದು ಕಲ್ಲು ತೂರಾಟ 
ದೇಶ

ಪಶ್ಚಿಮ ಬಂಗಾಳ: ಹಿಂಸಾರೂಪಕ್ಕೆ ತಿರುಗಿದ ರಾಮ ನವಮಿ ಆಚರಣೆ; ಹೌರಾ ಜಿಲ್ಲೆಯಲ್ಲಿ ಕಲ್ಲು ತೂರಾಟ, ಹಲವರಿಗೆ ಗಾಯ

ರಾಮನವಮಿಯಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರ ನಡೆದ ಕೇವಲ ಒಂದು ದಿನದ ನಂತರ ಹೌರಾದಲ್ಲಿ ಇಂದು ಶುಕ್ರವಾರ ಮತ್ತೊಂದು ಕಲ್ಲು ತೂರಾಟದ ಘಟನೆ ನಡೆದಿದೆ. 

ನವದೆಹಲಿ: ರಾಮನವಮಿಯಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರ ನಡೆದ ಕೇವಲ ಒಂದು ದಿನದ ನಂತರ ಹೌರಾದಲ್ಲಿ ಇಂದು ಶುಕ್ರವಾರ ಮತ್ತೊಂದು ಕಲ್ಲು ತೂರಾಟದ ಘಟನೆ ನಡೆದಿದೆ. 

ಶುಕ್ರವಾರ ಹೊಸ ಹಿಂಸಾಚಾರ ಭುಗಿಲೆದ್ದ ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ಬಿಗಿ ಭದ್ರತೆಗೆ ನಿಯೋಜಿಸಲಾಗಿದೆ. ಹೌರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಹಿಂಸಾಚಾರ ಮತ್ತು ಬೆಂಕಿ ಹಚ್ಚಲಾಗಿದೆ, ನಂತರ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರದೇಶದಲ್ಲಿ ಅಂಗಡಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಗಳ ಪ್ರಕಾರ, ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು, 36 ಜನರನ್ನು ಬಂಧಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಕಾನೂನು ತನ್ನ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಹೌರಾದಲ್ಲಿ ರಾಮನವಮಿ ಹಿಂಸಾಚಾರವನ್ನು ಬಿಜೆಪಿ ನಡೆಸಿದೆ ಎಂದು ಅವರು ಆರೋಪಿಸಿದರು. ಆಸ್ತಿ ಧ್ವಂಸಗೊಂಡ ಎಲ್ಲರಿಗೂ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದರು.

ಕೋಮುಗಲಭೆ ಎಬ್ಬಿಸಲು ಬಿಜೆಪಿ ಬೇರೆ ರಾಜ್ಯಗಳಿಂದ ಗೂಂಡಾಗಳನ್ನು ನೇಮಿಸಿಕೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಮಾಹಿತಿಗಳ ಪ್ರಕಾರ, ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದ್ದು, 10 ಜನರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಶಿಬ್ ಪುರನಲ್ಲಿ ಹಿಂಸಾಚಾರ: 'ರಾಮ ನವಮಿ'ಯಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಇಂದು ಹೊಸ ಹಿಂಸಾಚಾರ ಭುಗಿಲೆದ್ದಿರುವ ಹೌರಾದ ಶಿಬ್‌ಪುರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT