ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ವೇಳೆ ಹಿಂಸಾಚಾರ ನಡೆದು ಕಲ್ಲು ತೂರಾಟ 
ದೇಶ

ಪಶ್ಚಿಮ ಬಂಗಾಳ: ಹಿಂಸಾರೂಪಕ್ಕೆ ತಿರುಗಿದ ರಾಮ ನವಮಿ ಆಚರಣೆ; ಹೌರಾ ಜಿಲ್ಲೆಯಲ್ಲಿ ಕಲ್ಲು ತೂರಾಟ, ಹಲವರಿಗೆ ಗಾಯ

ರಾಮನವಮಿಯಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರ ನಡೆದ ಕೇವಲ ಒಂದು ದಿನದ ನಂತರ ಹೌರಾದಲ್ಲಿ ಇಂದು ಶುಕ್ರವಾರ ಮತ್ತೊಂದು ಕಲ್ಲು ತೂರಾಟದ ಘಟನೆ ನಡೆದಿದೆ. 

ನವದೆಹಲಿ: ರಾಮನವಮಿಯಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರ ನಡೆದ ಕೇವಲ ಒಂದು ದಿನದ ನಂತರ ಹೌರಾದಲ್ಲಿ ಇಂದು ಶುಕ್ರವಾರ ಮತ್ತೊಂದು ಕಲ್ಲು ತೂರಾಟದ ಘಟನೆ ನಡೆದಿದೆ. 

ಶುಕ್ರವಾರ ಹೊಸ ಹಿಂಸಾಚಾರ ಭುಗಿಲೆದ್ದ ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ಬಿಗಿ ಭದ್ರತೆಗೆ ನಿಯೋಜಿಸಲಾಗಿದೆ. ಹೌರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಹಿಂಸಾಚಾರ ಮತ್ತು ಬೆಂಕಿ ಹಚ್ಚಲಾಗಿದೆ, ನಂತರ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರದೇಶದಲ್ಲಿ ಅಂಗಡಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಗಳ ಪ್ರಕಾರ, ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು, 36 ಜನರನ್ನು ಬಂಧಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಕಾನೂನು ತನ್ನ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಹೌರಾದಲ್ಲಿ ರಾಮನವಮಿ ಹಿಂಸಾಚಾರವನ್ನು ಬಿಜೆಪಿ ನಡೆಸಿದೆ ಎಂದು ಅವರು ಆರೋಪಿಸಿದರು. ಆಸ್ತಿ ಧ್ವಂಸಗೊಂಡ ಎಲ್ಲರಿಗೂ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದರು.

ಕೋಮುಗಲಭೆ ಎಬ್ಬಿಸಲು ಬಿಜೆಪಿ ಬೇರೆ ರಾಜ್ಯಗಳಿಂದ ಗೂಂಡಾಗಳನ್ನು ನೇಮಿಸಿಕೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಮಾಹಿತಿಗಳ ಪ್ರಕಾರ, ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದ್ದು, 10 ಜನರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಶಿಬ್ ಪುರನಲ್ಲಿ ಹಿಂಸಾಚಾರ: 'ರಾಮ ನವಮಿ'ಯಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಇಂದು ಹೊಸ ಹಿಂಸಾಚಾರ ಭುಗಿಲೆದ್ದಿರುವ ಹೌರಾದ ಶಿಬ್‌ಪುರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT