ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ; 21 ಮಂದಿ ಬಂಧನ, 300 ಮಂದಿ ವಿರುದ್ಧ ಪ್ರಕರಣ ದಾಖಲು

ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 300 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಮತ್ತು 21 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ: ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 300 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಮತ್ತು 21 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಈ ಘಟನೆ ಗುರುವಾರ ರಾತ್ರಿ ಪಶ್ಚಿಮ ಉಪನಗರದ ಮಾಲ್ವಾನಿಯಲ್ಲಿ ನಡೆದಿದ್ದು, ಮೆರವಣಿಗೆ ನಡೆಯುತ್ತಿದ್ದಾಗ ಕೆಲವರು ಜೋರಾದ ಡಿಜೆ ಮತ್ತು ಅದರೊಂದಿಗೆ ಜೋರಾದ ಸಂಗೀತವನ್ನು ವಿರೋಧಿಸಿದರು.

ಘರ್ಷಣೆಯಲ್ಲಿ ಭಾಗಿಯಾದವರನ್ನು ಆ ಸಮಯದಲ್ಲಿ ಡ್ರೋನ್ ಮತ್ತು ಸಿಸಿಟಿವಿ ದೃಶ್ಯಗಳ ಸಹಾಯದಿಂದ ಗುರುತಿಸಲಾಗುತ್ತಿದೆ ಮತ್ತು ಅವರ ಪಾತ್ರದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಸುಮಾರು 300 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಇದುವರೆಗೆ 21 ಜನರನ್ನು ಬಂಧಿಸಿದ್ದಾರೆ ಮತ್ತು ಹೆಚ್ಚಿನ ಬಂಧನದ ಸಾಧ್ಯತೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಎಫ್‌ಐಆರ್‌ನಲ್ಲಿ, ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮೊದಲೂ ಗಲಭೆ ಆರೋಪದ ಮೇಲೆ 20ಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿದ್ದರು ಮತ್ತು ಇತರರನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಆತಂಕ ಮನೆ ಮಾಡಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಲಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೆಲವು ಸ್ಥಳೀಯ ರಾಜಕೀಯ ಮುಖಂಡರು ಸ್ಥಳಕ್ಕೆ ಧಾವಿಸಿ ಶಾಂತಿಗಾಗಿ ಮನವಿ ಮಾಡಿದರು ಎಂದು ಅಧಿಕಾರಿ ಹೇಳಿದರು.

ಘಟನೆಯ ನಂತರ, ಬಲಪಂಥೀಯ ಸಂಘಟನೆಯ ಬೆಂಬಲಿಗರು ಮಾಲ್ವಾನಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT