ಕೇಂದ್ರ ಸರ್ಕಾರ 
ದೇಶ

ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ: 'ಸುಪ್ರೀಂ'ಗೆ ಕೇಂದ್ರ

 ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದೆ.

ನವದೆಹಲಿ: ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದೆ.

ದೇಶದ್ರೋಹದ ಕಾನೂನಿನ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಬ್ರಿಟೀಷ್ ಕಾಲದ ಕಾನೂನನ್ನು ಮರುಪರಿಶೀಲನೆ ಮಾಡುವ ವಿಷಯದಲ್ಲಿ ಸಮಾಲೋಚನೆ ಮುಂದುವರಿದ ಹಂತದಲ್ಲಿದೆ ಎಂದು ತಿಳಿಸಿದೆ. 

ನ್ಯಾ.ಡಿವೈ ಚಂದ್ರಚೂಡ್ ಹಾಗೂ ನ್ಯಾ. ಜೆಬಿ ಪರ್ದಿವಾಲ ಅವರಿದ್ದ ಪೀಠ, ಕೇಂದ್ರ ಸರ್ಕಾರದ ಮಾಹಿತಿಯನ್ನು ಪರಿಗಣಿಸಿದೆ. ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 2ನೇ ವಾರಕ್ಕೆ ಮುಂದೂಡಿದೆ.

ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿದ್ದವು. ಈ ಕಾನೂನಿನ ಸಿಂಧುತ್ವವನ್ನು ಮರುಪರಿಶೀಲನೆ ಮಾಡುವ ವಿಷಯ ಸಂಸತ್ ಗೆ ತೆಗೆದುಕೊಂಡು ಹೋಗುವುದಕ್ಕೂ ಮುನ್ನ ಕೋರ್ಟ್ ಗಮನಕ್ಕೆ ತರಲಾಗುವುದು ಎಂದು ಅಟಾರ್ನಿ ಜನರಲ್ ವೆಂಕಟರಮಣಿ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT