ಉದ್ಧವ್ ಠಾಕ್ರೆ 
ದೇಶ

ಕೇಂದ್ರ ಸರ್ಕಾರ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಹೀಗಾಗಿ ಅವರು ಬೃಹತ್ ಯೋಜನೆಗಳು, ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಒಂದರ ನಂತರ ಒಂದರಂತೆ ಗುಜರಾತ್....

ಮುಂಬೈ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಹೀಗಾಗಿ ಅವರು ಬೃಹತ್ ಯೋಜನೆಗಳು, ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಒಂದರ ನಂತರ ಒಂದರಂತೆ ಗುಜರಾತ್ ಅಥವಾ ದೆಹಲಿಯಲ್ಲಿಗೆ ಸ್ಥಳಾಂತರಿಸುವ ಮೂಲಕ ಮುಂಬೈನ ಪ್ರಾಮುಖ್ಯತೆಯನ್ನು ಕಡಿಮೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಬಿಕೆಸಿಯಲ್ಲಿ ಮಹಾ ವಿಕಾಸ್ ಅಘಾಡಿಯ ಮೆಗಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, ಮಹಾರಾಷ್ಟ್ರದಿಂದ ಮೆಗಾ ಅಭಿವೃದ್ಧಿ ಯೋಜನೆಗಳನ್ನು ಸ್ಥಳಾಂತರಿಸಲು ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ನಮ್ಮ ಸರ್ಕಾರವನ್ನು ಪತನಗೊಳಿಸಿತು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಉರುಳಿಸಿದ ನಂತರ, ಹೊಸ ಸರ್ಕಾರ ಬುಲೆಟ್ ರೈಲಿಗಾಗಿ ಬೆಲೆಬಾಳುವ ಬಿಕೆಸಿ ಪ್ಲಾಟ್ ಅನ್ನು ಹಸ್ತಾಂತರಿಸಿತು. ಪ್ರತಿದಿನ ಮುಂಬೈನಿಂದ ಅಹಮದಾಬಾದ್‌ಗೆ ಎಷ್ಟು ಜನ ಪ್ರಯಾಣಿಸುತ್ತಾರೆ? ಇಂತಹ ಯೋಜನೆಗಳನ್ನು ಮಹಾರಾಷ್ಟ್ರದ ಮೇಲೆ ಏಕೆ ಹೇರಲಾಗಿದೆ ಎಂದು ಠಾಕ್ರೆ ಪ್ರಶ್ನಿಸಿದರು.

ಈ ಮುಂಚೆ ಎಸಿಸಿ ಮತ್ತು ಅಂಬುಜಾ ಸಿಮೆಂಟ್ ಮುಖ್ಯ ಕಚೇರಿಗಳು ಮುಂಬೈನಲ್ಲಿದ್ದವು. ಆದರೆ ಗೌತಮ್ ಅದಾನಿ ಅವುಗಳನ್ನು ವಹಿಸಿಕೊಂಡ ನಂತರ ಆ ಎರಡೂ ಸಂಸ್ಥೆಗಳ ಮುಖ್ಯ ಕಚೇರಿಗಳು ಗುಜರಾತ್‌ಗೆ ಸ್ಥಳಾಂತರಗೊಂಡವು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಹಣಕಾಸು ಕೇಂದ್ರಗಳ ಕಚೇರಿಗಳನ್ನು ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ. ನಾವು ಒಂದರ ನಂತರ ಒಂದರಂತೆ ಬೃಹತ್ ಯೋಜನೆಗಳನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಗುಜರಾತ್ ಅಥವಾ ದೆಹಲಿಗೆ ಸ್ಥಳಾಂತರಿಸಲಾಗಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT