ಶರದ್ ಪವಾರ್- ಉದ್ಧವ್ ಠಾಕ್ರೆ 
ದೇಶ

ಉದ್ಧವ್ ಠಾಕ್ರೆಗೆ ರಾಜಕೀಯ ಚತುರತೆ ಕಡಿಮೆ ಹೋರಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶರದ್ ಪವಾರ್

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು, ಉದ್ಧವ್ ಠಾಕ್ರೆ ಹೋರಾಡದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಹೇಳಿದ್ದಾರೆ.

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು, ಉದ್ಧವ್ ಠಾಕ್ರೆ ಹೋರಾಡದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಹೇಳಿದ್ದಾರೆ.

ಮಂಗಳವಾರದಂದು ಶರದ್ ಪವಾರ್ ಅವರ ಆತ್ಮಚರಿತ್ರೆ ಪುಸ್ತಕದ ಪರಿಷ್ಕೃತ ಆವೃತ್ತಿ ಬಿಡುಗಡೆಯಾಗಿದ್ದು, ಈ ಪುಸ್ತಕದಲ್ಲಿ ಉದ್ಧವ್ ಠಾಕ್ರೆ ಬಗ್ಗೆ ಪವಾರ್ ಮಾತನಾಡಿದ್ದಾರೆ. 

ಪಕ್ಷದೊಳಗಿನ ಅಸಮಾಧಾನವನ್ನು ಸರಿಪಡಿಸುವಲ್ಲಿ ಸಿಎಂ ಆಗಿದ್ದ ಉದ್ಧವ್ ಠಾಕ್ರೆ ವಿಫಲರಾದರು ಹಾಗೂ ಯಾವುದೇ ಹೋರಾಟವನ್ನೂ ನಡೆಸದೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು ಎಂದು ಪವಾರ್ ಅಭಿಪ್ರಾಯಪಟ್ಟಿದ್ದಾರೆ.

ಒಬ್ಬ ಮುಖ್ಯಮಂತ್ರಿಯಾಗಿ ಅಗತ್ಯವಿರುವ ರಾಜಕೀಯ ಚತುರತೆ ಉದ್ಧವ್ ಠಾಕ್ರೆಗೆ ಕಡಿಮೆ ಎಂದೂ ಹೇಳಿರುವ ಪವಾರ್,  ಎಂವಿಎ ರಚನೆ ಕೇವಲ ಒಂದು ಅಧಿಕಾರದ ಆಟವಾಗಿರಲಿಲ್ಲ. ಆದರೆ ಮತ್ತೊಂದು ರಾಜಕೀಯ ಪಕ್ಷವನ್ನು ಹೇಗಾದರೂ ಸರಿ ನಿರ್ನಾಮ ಮಾಡುವ ಬಿಜೆಪಿಯ ಪ್ರವೃತ್ತಿಗೆ ಪ್ರತಿಯಾದ ಅಸ್ತ್ರವಾಗಿತ್ತು ಎಂದೂ ಪವಾರ್ ಪುಸ್ತಕದಲ್ಲಿ ಹೇಳಿದ್ದಾರೆ.

ಎಂವಿಎ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತದೆ ಎಂಬುದು ನಿರೀಕ್ಷಿತವೇ ಆಗಿದ್ದರೂ ಅದು ಉದ್ಧವ್ ಠಾಕ್ರೆ ಸಿಎಂ ಆಗುವ ಮೂಲಕ ಶಿವಸೇನೆಯಲ್ಲೇ ಒಡಕು ಉಂಟಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪವಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT