ಅಮಿತ್ ಶಾ 
ದೇಶ

ಕರ್ನಾಟಕದಲ್ಲಿ ಕಾಂಗ್ರೆಸ್ ಬಂದರೆ ಗಲಭೆಗಳಾಗುತ್ತವೆ ಹೇಳಿಕೆ: ಅಮಿತ್ ಶಾ ವಿರುದ್ಧ ಬಿಹಾರದಲ್ಲಿ ಪ್ರಕರಣ ದಾಖಲು

ತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಪಾಟ್ನಾ: ತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಏಪ್ರಿಲ್ 25 ರಂದು ಕರ್ನಾಟಕದ ಬೆಳಗಾವಿಯಲ್ಲಿ ನಡೆದ ರ‍್ಯಾಲಿಯಲ್ಲಿ ಶಾ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳು ನಡೆಯುತ್ತವೆ ಎಂದು ಹೇಳಿದ್ದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗಿದೆ.

'ಅಮಿತ್ ಶಾ ತಮ್ಮ ಭಾಷಣದ ಮೂಲಕ ಕರ್ನಾಟಕದಲ್ಲಿ ದ್ವೇಷ ಮತ್ತು ಕೋಮು ಉದ್ವಿಗ್ನತೆಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳು ನಡೆಯುತ್ತವೆ ಎಂದಿದ್ದಾರೆ. ಅದೊಂದು ಪ್ರಚೋದನಕಾರಿ ಭಾಷಣ. ಆದ್ದರಿಂದ ನಾವು ಅವರ ವಿರುದ್ಧ ಐಪಿಸಿ ಸೆಕ್ಷನ್ 153, 505 (2) ಮತ್ತು 506 ರ ಅಡಿಯಲ್ಲಿ (ಸಂಖ್ಯೆ 490/23) ಪ್ರಕರಣವನ್ನು ದಾಖಲಿಸಿದ್ದೇವೆ' ಎಂದು ಪ್ರತಿಭಾ ಸಿಂಗ್ ಹೇಳಿದರು.

ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಅಮಿತ್ ಶಾ ಅವರು ಉದ್ದೇಶಪೂರ್ವಕವಾಗಿ ಕರ್ನಾಟಕದಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ಮತ್ತು ಪಾಟ್ನಾ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತ್ಯೇಕ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳ ಹಿನ್ನೆಲೆಯಲ್ಲಿ ಸಿಂಗ್ ಅವರ ಈ ಕ್ರಮವನ್ನು ಬಿಜೆಪಿಗೆ ಪ್ರತಿಕ್ರಿಯೆಯಾಗಿ ಕಾಣಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!