ಜಮ್ಮು ಪೊಲೀಸರು 
ದೇಶ

ಇದೇ ಮೊದಲು, ಜಮ್ಮುವಿನಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳಾ ಪೊಲೀಸರ ನಿಯೋಜನೆ!

ಮಹಿಳೆಯರ ಸುರಕ್ಷತೆ ಖಾತ್ರಿ  ಮತ್ತು ಮಹಿಳಾ ಡ್ರಗ್ ಪೆಡ್ಲರ್‌ಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ರಾತ್ರಿ ಸಮಯದಲ್ಲಿ ಜಮ್ಮು ನಗರದ ವಿವಿಧ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಮಹಿಳೆಯರ ಸುರಕ್ಷತೆ ಖಾತ್ರಿ  ಮತ್ತು ಮಹಿಳಾ ಡ್ರಗ್ ಪೆಡ್ಲರ್‌ಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ರಾತ್ರಿ ಸಮಯದಲ್ಲಿ ಜಮ್ಮು ನಗರದ ವಿವಿಧ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ ಸಮಯದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಿರುವುದು ಇದೇ ಮೊದಲು ಎಂದು ಅವರು ಹೇಳಿದ್ದಾರೆ. 

ರಾತ್ರಿ ವೇಳೆಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆ ಖಾತ್ರಿಪಡಿಸಲು ಹಾಗೂ ಮಹಿಳೆಯರ ತಪಾಸಣೆಗೆ ನಗರದ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಮಹಿಳಾ ಪೊಲೀಸ ನಿಯೋಜಿಸಲಾಗಿದೆ ಎಂದು ಕಾನ್‌ಸ್ಟೆಬಲ್‌ ಅನಿತಾ ತಿಳಿಸಿದ್ದಾರೆ. ಸ್ಥಳೀಯ ಮಹಿಳೆಯರ ಚಲನವಲನಗಳ ಬಗ್ಗೆ ಹೆಚ್ಚಿನ ನಿಗಾ ಇಡಲಾಗುವುದು, ಏಕೆಂದರೆ ಪುರುಷ ಪೊಲೀಸರು ಅವರನ್ನು ಹೆಚ್ಚು ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕರ್ತವ್ಯ ನಿರ್ವಹಿಸಲಾಗುವುದು ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಮೂಲಗಳ ಪ್ರಕಾರ, ಪುರುಷ ಪೊಲೀಸರೊಂದಿಗೆ 50 ರಿಂದ 60 ಕ್ಕೂ ಹೆಚ್ಚು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ನಗರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಮ್ಮು ನಗರದ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹೆಚ್ಚಿನ ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ. ಮುಂದಿನ ಹಂತದಲ್ಲಿ ಅವರನ್ನು ಜಮ್ಮುವಿನ ಗ್ರಾಮಾಂತರ ಪ್ರದೇಶಗಳಿಗೂ ನಿಯೋಜಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಈ ಕ್ರಮವನ್ನು ಅಲ್ಲಿನ ಮಹಿಳಾ ನಿವಾಸಿಗಳು ಸ್ವಾಗತಿಸಿದ್ದಾರೆ. "ಇದು ಪೊಲೀಸರಿಂದ ಉತ್ತಮ ಮತ್ತು ಶ್ಲಾಘನೀಯ ಉಪಕ್ರಮವಾಗಿದೆ. ಇದು ರಾತ್ರಿಯಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಸಹಾಯ ಮಾಡುತ್ತದೆ. ಇದು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೂ ಸಹಾಯ ಮಾಡುತ್ತದೆ" ಎಂದು ಸ್ಥಳೀಯ ನಿವಾಸಿ ತಾರಿಕಾ ಮಹಾಜನ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT