ಪೊಲೀಸರು ಹಾಗೂ ಪ್ರತಿಭಟನಾಕಾರರು 
ದೇಶ

ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಕುಸ್ತಿಪಟು ಬಜರಂಗ್ ಫುನಿಯಾ, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು ನಮ್ಮ ಮೇಲೆ ಬಲ ಪ್ರಯೋಗ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ. ಎಲ್ಲರೂ ದೆಹಲಿಗೆ ಬರಬೇಕು ಎಂದು ಮನವಿ ಮಾಡಿದರು. 

ಘರ್ಷಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ಪ್ರಣವ್ ತಾಯಲ್, ಆಪ್ ನಾಯಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆ ಸಮೇತ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಆಗ ಉದ್ರಿಕ್ತರಾದ ಪ್ರತಿಭಟನಾಕಾರರು ಟ್ರಕ್ ನಿಂದ ಬೆಡ್ ಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ತದನಂತರ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಸೋಮನಾಥ್ ಭಾರ್ತಿ  ಅವರೊಂದಿಗೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT