ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಚೀನಾದ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಅವರ ಜೊತೆ ಡಾ. ಎಸ್. ಜೈಶಂಕರ್ ದ್ವಿಪಕ್ಷೀಯ ಮಾತುಕತೆ ನಡೆಸಿದರು 
ದೇಶ

ಭಯೋತ್ಪಾದನೆ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು: ಎಸ್ ಸಿಒ ಶೃಂಗಸಭೆಯಲ್ಲಿ ಎಸ್ ಜೈಶಂಕರ್ ಒತ್ತಾಯ

ಗಡಿಯಾಚೆಗಿನ ಭಯೋತ್ಪಾದನೆ ಒಳಗೊಂಡಂತೆ ಎಲ್ಲಾ ರೂಪಗಳಲ್ಲಿ ಬೆದರಿಕೆಯನ್ನು ನಿಲ್ಲಿಸಬೇಕು ಎಂದು ಪಾಕಿಸ್ತಾನವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಯೋತ್ಪಾದನೆಯನ್ನು ದೃಢವಾಗಿ ಎದುರಿಸಲು ಶಾಂಘೈ ಸಹಕಾರ ಸಂಘಟನೆ (ScO)ಗೆ ಶುಕ್ರವಾರ ಕರೆ ನೀಡಿದ್ದಾರೆ.

ಬೆನೌಲಿಮ್(ಗೋವಾ): ಗಡಿಯಾಚೆಗಿನ ಭಯೋತ್ಪಾದನೆ ಒಳಗೊಂಡಂತೆ ಎಲ್ಲಾ ರೂಪಗಳಲ್ಲಿ ಬೆದರಿಕೆಯನ್ನು ನಿಲ್ಲಿಸಬೇಕು ಎಂದು ಪಾಕಿಸ್ತಾನವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಯೋತ್ಪಾದನೆಯನ್ನು ದೃಢವಾಗಿ ಎದುರಿಸಲು ಶಾಂಘೈ ಸಹಕಾರ ಸಂಘಟನೆ (ScO)ಗೆ ಶುಕ್ರವಾರ ಕರೆ ನೀಡಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ, ಚೀನಾದ ಕ್ವಿನ್ ಗ್ಯಾಂಗ್ ಮತ್ತು ರಷ್ಯಾದ ಸೆರ್ಗೆ ಲಾವ್ರೊವ್ ಸಮ್ಮುಖದಲ್ಲಿ ಜೈಶಂಕರ್ ಅವರು ಇಂದು ಎಸ್ ಸಿಒ ಸಮಾವೇಶದಲ್ಲಿ, ಭಯೋತ್ಪಾದನೆ ಸಮಸ್ಯೆಯನ್ನು ಕಡೆಗಣಿಸಿದರೆ ದೇಶದ ಭದ್ರತಾ ಹಿತಾಸಕ್ತಿಗಳಿಗೆ ಹಾನಿಯುಂಟಾಗುತ್ತದೆ ಎಂದಿದ್ದಾರೆ. 

ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುವುದನ್ನು ಕಟ್ಟುನಿಟ್ಟಿನ ಕ್ರಮದಿಂದ ನಿಲ್ಲಿಸಬೇಕು ಎಂದು ವಿದೇಶಾಂಗ ಸಚಿವರು ಸಭೆಯಲ್ಲಿ ಒತ್ತಾಯಿಸಿದರು.

ಕೋವಿಡ್ -19 ಸಾಂಕ್ರಾಮಿಕ ಮತ್ತು ಅದರಿಂದಾದ ಸಮಸ್ಯೆಗಳನ್ನು, ತೊಂದರೆಗಳನ್ನು ಎದುರಿಸುವಲ್ಲಿ ಜಗತ್ತು ತೊಡಗಿರುವಾಗ, ಭಯೋತ್ಪಾದನೆಯ ಬೆದರಿಕೆಯು ಅಡೆತಡೆಯಿಲ್ಲದೆ ಮುಂದುವರಿಯುತ್ತಿದೆ. ಭಯೋತ್ಪಾದನೆ ಕುಕೃತ್ಯಗಳಿಗೆ ಯಾವುದೇ ಸಮರ್ಥನೆಯಿಲ್ಲ ಎಂದು ನಾವು ದೃಢವಾಗಿ ನಂಬುತ್ತೇವೆ. ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಅದನ್ನು ನಿಲ್ಲಿಸಬೇಕು. ಭಯೋತ್ಪಾದನೆಯನ್ನು ಎದುರಿಸುವುದು ಶಾಂಘೈ ಸಹಕಾರ ಸಂಘಟನೆಯ ಮೂಲ ಆದೇಶಗಳಲ್ಲಿ ಒಂದಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಕಾಮಕಾಂಡ: ಸಚಿವ ನರಹರಿ ಜಿರ್ವಾಲ್ 'ಅಶ್ಲೀಲ ವಿಡಿಯೋ' ವೈರಲ್!

ಕಾಡುಪ್ರಾಣಿಗಳ ದಾಳಿಯಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಉದ್ಯೋಗವಿಲ್ಲ: ಸಚಿವ ಈಶ್ವರ್ ಖಂಡ್ರೆ

SCROLL FOR NEXT