ಮಮತಾ ಬ್ಯಾನರ್ಜಿ 
ದೇಶ

ಮಣಿಪುರ ಹಿಂಸಾಚಾರ: ಶಾಂತಿ ಮರುಸ್ಥಾಪಿಸಿ- ಅಮಿತ್ ಶಾ, ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಆಗ್ರಹ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಗ್ರಹಿಸಿದ್ದಾರೆ.

ಕೋಲ್ಕತಾ: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಣಿಪುರದ ಪರಿಸ್ಥಿತಿ ತೀವ್ರ ಕಳವಳವನ್ನುಂಟು ಮಾಡಿದೆ. ಈ ಸಮಯದಲ್ಲಿ ರಾಜಕೀಯ ಮಾಡಬಾರದು. ರಾಜಕೀಯ, ಚುನಾವಣೆಗಳು ಇದ್ದೇ ಇರುತ್ತದೆ. ಆದರೆ, ನಮ್ಮ ಸುಂದರ ರಾಜ್ಯ ಮಣಿಪುರವನ್ನು ಮೊದಲು ರಕ್ಷಿಸಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಾಂತಿ ಮತ್ತು ಸೌಹಾರ್ದತೆಯನ್ನು ಎತ್ತಿಹಿಡಿಯುವಂತೆ ಮಣಿಪುರದ ನಮ್ಮ ಸಹೋದರ ಸಹೋದರಿಯರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದ್ದಾರೆ.

ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT