ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್...

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್ ಶುಕ್ರವಾರ ಹೇಳಿದ್ದಾರೆ.

"ಸಮಿತಿಯು ಸರ್ವಾನುಮತದಿಂದ ಶರದ್ ಪವಾರ್ ಅವರ ರಾಜೀನಾಮೆ ತಿರಸ್ಕರಿಸಿ ನಿರ್ಣಯ ಅಂಗೀಕರಿಸಿದೆ. ಇದು ಅವರ ರಾಜೀನಾಮೆ ನಿರ್ಧಾರವನ್ನು ಸರ್ವಾನುಮತದಿಂದ ತಿರಸ್ಕರಿಸುತ್ತದೆ ಮತ್ತು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸುತ್ತದೆ" ಎಂದು ಸಮಿತಿಯ ಸಭೆಯ ನಂತರ ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶರದ್ ಪವಾರ್ ಅವರು ಮೇ 2 ರಂದು ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ನಂತರ ಸ್ವತಃ ಶರದ್ ಪವಾರ್ ಅವರೇ ನೂತನ ಅಧ್ಯಕ್ಷರ ನೇಮಕ ಸಂಬಂಧ ಅಜಿತ್ ಪವಾರ್, ಸುಪ್ರಿಯಾ ಸುಳೆ, ಮಾಜಿ ಕೇಂದ್ರ ಸಚಿವ ಪರ್ಫುಲ್ ಪಟೇಲ್ ಮತ್ತು ಛಗನ್ ಭುಜಬಲ್ ಒಳಗೊಂಡ ಸಮಿತಿ ರಚಿಸಿದ್ದರು.

"ನಾವು ಈ ನಿರ್ಣಯದೊಂದಿಗೆ ಪವಾರ್ ಸಾಹೇಬ್ ಅವರನ್ನು ಭೇಟಿ ಮಾಡುತ್ತೇವೆ ಮತ್ತು ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುತ್ತೇವೆ" ಎಂದು ಸಮಿತಿಯ ಉಪಾಧ್ಯಕ್ಷ ಮತ್ತು ಸಂಚಾಲಕರೂ ಆಗಿರುವ ಪ್ರಫುಲ್ ಪಟೇಲ್ ಅವರು ಹೇಳಿದ್ದಾರೆ.

ಪಕ್ಷ ಮತ್ತು ದೇಶಕ್ಕೆ ಶರದ್ ಪವಾರ್ ಅವರಂತಹ ನಾಯಕನ ಅಗತ್ಯವಿದೆ. ಪವಾರ್ ಸಾಹೇಬ್ ಅವರು ದೇಶದ ಗೌರವಾನ್ವಿತ ನಾಯಕರಾಗಿದ್ದಾರೆ. ಪವಾರ್ ಅವರ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅವರ ಭಾವನೆಗಳನ್ನು ನಿರ್ಲಕ್ಷಿಸಲಾಗುವುದಿಲ್ಲ" ಎಂದು ಪಟೇಲ್ ತಿಳಿಸಿದ್ದಾರೆ.

ಸಭೆ ಆರಂಭವಾಗುತ್ತಿದ್ದಂತೆ, ಹಲವಾರು ಎನ್‌ಸಿಪಿ ಕಾರ್ಯಕರ್ತರು "ಐ ಆಮ್ ವಿತ್ ಸಾಹೇಬ್" ಎಂಬ ಸಂದೇಶದೊಂದಿಗೆ ಕ್ಯಾಪ್ ಧರಿಸಿ ಪವಾರ್ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT