ಸಾಂದರ್ಭಿಕ ಚಿತ್ರ 
ದೇಶ

ಅಬಕಾರಿ ನೀತಿ: ಇಬ್ಬರು ಆರೋಪಿಗಳಿಗೆ ಜಾಮೀನು; ಬಿಜೆಪಿ ಕ್ಷಮೆಯಾಚಿಸಲು ಎಎಪಿ ಆಗ್ರಹ

ಅಬಕಾರಿ ನೀತಿ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಕ್ಯಾಬಿನೆಟ್ ಸಚಿವರಾದ ಅತಿಶಿ, ಮದ್ಯದ ಉದ್ಯಮಿಗಳಿಂದ 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಸ್ವೀಕರಿಸಲಾಗಿದೆ ಮತ್ತು ಗೋವಾ ಚುನಾವಣೆಯಲ್ಲಿ ಹಣವನ್ನು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿದೆ. "ನಿನ್ನೆ ರೋಸ್ ಅವೆನ್ಯೂ ನ್ಯಾಯಾಲಯ ರಾಜೇಶ್ ಜೋಶಿ ಮತ್ತು ಗೌತಮ್ ಮಲ್ಹೋತ್ರಾ ಅವರಿಗೆ ಜಾಮೀನು ನೀಡಿದೆ. ಲಂಚ ಅಥವಾ ಕಿಕ್‌ಬ್ಯಾಕ್‌ ಸಂಬಂಧ ನಗದು ಪಾವತಿ ತೋರಿಸುವ ಯಾವುದೇ ಪುರಾವೆಗಳನ್ನು ಇಡಿ ಇಟ್ಟಿಲ್ಲ ಎಂದು ನ್ಯಾಯಾಲಯದ ಆದೇಶದಲ್ಲಿ ಹೇಳಲಾಗಿದೆ. ಸಾಕ್ಷಿಗಳ ಕೆಲವು ಅಸ್ಪಷ್ಟ ಹೇಳಿಕೆಗಳನ್ನು ಇಡಿ ಲಗತ್ತಿಸಿರುವುದಾಗಿ ಆದೇಶದಲ್ಲಿ ತಿಳಿಸಿರುವುದಾಗಿ ಸಚಿವರು ಹೇಳಿದರು. 

ಇಡೀ ಪ್ರಕರಣ ಬೋಗಸ್  ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.  "ಕಿಕ್‌ಬ್ಯಾಕ್ ಅಥವಾ ಹಣ ವರ್ಗಾವಣೆ ಸಂಬಂಧ ಯಾವುದೇ ಸಾಕ್ಷಿ ಇಲ್ಲ ಎಂದು ಈಗ ಕೋರ್ಟ್ ಕೂಡಾ ಹೇಳಿದೆ. ಇಡೀ ಮದ್ಯ ಹಗರಣ ಬೋಗಸ್ ಮತ್ತು ಎಎಪಿ ಸರ್ಕಾರದ ಹೆಸರು ಕೆಡಿಸಲು ಮಾಡಲಾಗುತ್ತಿರುವ ಆರೋಪ ಎಂದು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!