ಮಣಿಪುರ 
ದೇಶ

ಸಹಜ ಸ್ಥಿತಿಗೆ ಮರಳಿದ ಮಣಿಪುರ, ಕರ್ಫ್ಯೂ ಸಡಿಲಿಕೆ

ಕಳೆದ ಕೆಲವು ದಿನಗಳಿಂದ ರಕ್ತಸಿಕ್ತ ಜನಾಂಗೀಯ ಗಲಭೆಗೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಭಾನುವಾರ ಕರ್ಫ್ಯೂ ಸಡಿಲಿಸಲಾಗಿದ್ದು, ಸೇನಾ ಡ್ರೋನ್‌ಗಳ ವೈಮಾನಿಕ ಕಾವಲು ಮತ್ತು ಹೆಲಿಕಾಪ್ಟರ್‌ಗಳ ಕಾವಲು ಅಡಿಯಲ್ಲಿ ಜನಜೀವನ ಸಹಜ...

ಇಂಫಾಲ್: ಕಳೆದ ಕೆಲವು ದಿನಗಳಿಂದ ರಕ್ತಸಿಕ್ತ ಜನಾಂಗೀಯ ಗಲಭೆಗೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಭಾನುವಾರ ಕರ್ಫ್ಯೂ ಸಡಿಲಿಸಲಾಗಿದ್ದು, ಸೇನಾ ಡ್ರೋನ್‌ಗಳ ವೈಮಾನಿಕ ಕಾವಲು ಮತ್ತು ಹೆಲಿಕಾಪ್ಟರ್‌ಗಳ ಕಾವಲು ಅಡಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಗಲಭೆ ಪೀಡಿತ ಚುರಚಂದ್‌ಪುರ ಪಟ್ಟಣದಲ್ಲಿ ಇಂದು ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಈ ಅವಧಿಯಲ್ಲಿ ಜನ ಆಹಾರ, ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಕಂಡುಬಂದಿದೆ.

ಬೆಳಗ್ಗೆ 10 ಗಂಟೆಗೆ ಕರ್ಫ್ಯೂ ಸಡಿಲಿಕೆ ಮುಗಿದ ತಕ್ಷಣ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆ ಪಟ್ಟಣದಲ್ಲಿ ಧ್ವಜ ಮೆರವಣಿಗೆ ನಡೆಸಿದವು. ಇಡೀ ಗಲಭೆ ಪೀಡಿತ ರಾಜ್ಯದಲ್ಲಿ ಸುಮಾರು 120-125 ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ಮಣಿಪುರದಲ್ಲಿ ಸುಮಾರು 10,000 ಸೈನಿಕರು, ಪ್ಯಾರಾ ಮಿಲಿಟರಿ ಮತ್ತು ಕೇಂದ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಂತಿ ಸ್ಥಾಪನೆಗೆ ಸಂಬಂಧಿಸಿದ ಉಪಕ್ರಮಗಳನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT