ನಕ್ಸಲ್ ಎನ್ ಕೌಂಟರ್ 
ದೇಶ

ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ

ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತರನ್ನು ಚೇರ್ಲಾ ಸಂಘಟನೆಯ ರಾಜೇಶ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಂದ ಎರಡು ಎಸ್‌ಎಲ್‌ಆರ್ ರೈಫಲ್ ಸೇರಿದಂತೆ ಕೆಲವು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗೆ ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ಸ್ಪೋಟಕ ಸಿಡಿಸಿ 11 ಪೊಲೀಸರನ್ನು ಕೊಂದಿದ್ದರು.

ತೆಲಂಗಾಣ-ಛತ್ತೀಸ್‌ಗಢ ಗಡಿಯಲ್ಲಿರುವ ಮಂಡಲದ ಪುಟ್ಟಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಉಪಸ್ಥಿತಿ ಕಂಡ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT