ಭಜರಂಗ ದಳ (ಸಾಂದರ್ಭಿಕ ಚಿತ್ರ) 
ದೇಶ

ಬಜರಂಗದಳ ನಿಷೇಧ ವಿವಾದ: ಮೇ 9 ರಂದು ವಿಎಚ್‌ಪಿ, ಬಜರಂಗದಳ ಪ್ರತಿಭಟನೆ, ರಾಷ್ಟ್ರವ್ಯಾಪಿ  ‘ಹನುಮಾನ್ ಚಾಲೀಸಾ’ ಪಠಣ

ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ  ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ  ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಅದರ ಯುವ ಘಟಕ ಬಜರಂಗದಳ ಭಾನುವಾರ ಹೇಳಿದೆ.

ಕಳೆದ ವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಬದ್ಧವಾಗಿದ್ದು, ತಮ್ಮ ಸರ್ಕಾರ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಹೇಳಿತ್ತು. ಕಾಂಗ್ರೆಸ್ ಪಕ್ಷದ ಈ ನಡೆ ವಿರುದ್ಧ ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.

ಮೇ 9 ರಂದು ದೇಶಾದ್ಯಂತ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಒಕ್ಕೋರಲಿನಿಂದ ವಿರೋಧಿಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು, 'ಭಯೋತ್ಪಾದಕರು, ಭಾರತ್ ವಿರೋಧಿಗಳ ಪರ ವಕಾಲತ್ತು ವಹಿಸುವ ಮತ್ತು ಉತ್ತೇಜಿಸಲು ನಿಂತಿರುವ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಮತ್ತು ಕಾರ್ಯಕರ್ತರಿಗೆ ಸದ್ಬುದ್ಧಿ (ಸದ್ಬುದ್ಧಿ) ನೀಡಲು ಭಜರಂಗ ಬಲಿ (ಹನುಮಾನ್) ಅನ್ನು ಆಹ್ವಾನಿಸಲು ಕಾರ್ಯಕ್ರಮವನ್ನು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT