ಮಣಿಪುರ ಜನರು 
ದೇಶ

ಮಣಿಪುರ ಹಿಂಸಾಚಾರ: 60 ಸಾವು, 231 ಮಂದಿಗೆ ಗಾಯ, 1700 ಮನೆಗಳಿಗೆ ಬೆಂಕಿ; ಶಾಂತಿ ಸ್ಥಾಪನೆಗಾಗಿ ಸಿಎಂ ಮನವಿ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ರಾಜ್ಯದ ಜನತೆಗೆ ಶಾಂತಿ ನೆಲೆಸುವಂತೆ ಮನವಿ ಮಾಡಿದರು.

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ರಾಜ್ಯದ ಜನತೆಗೆ ಶಾಂತಿ ನೆಲೆಸುವಂತೆ ಮನವಿ ಮಾಡಿದರು. 

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಇದುವರೆಗೆ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಿಂಸಾಚಾರದಲ್ಲಿ ಇದುವರೆಗೆ ಸುಮಾರು 60 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿರೇನ್ ಸಿಂಗ್ ಹೇಳಿದ್ದಾರೆ. ಈ ಹಿಂಸಾಚಾರದಲ್ಲಿ ಇದುವರೆಗೆ 231 ಜನರು ಗಾಯಗೊಂಡಿದ್ದಾರೆ. ಅಲ್ಲದೆ ಮೇ 3ರಂದು ಭುಗಿಲೆದ್ದ ಈ ಹಿಂಸಾಚಾರದಲ್ಲಿ 1700 ಮನೆಗಳು ಸುಟ್ಟು ಹೋಗಿವೆ.

ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಸಹಕರಿಸುವಂತೆ ಸಿಎಂ ಬಿರೇನ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಈ ವೇಳೆ ಗಲಭೆಯಿಂದಾಗಿ ಆಯಾ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಅವರವರ ಸ್ಥಳಗಳಿಗೆ ಕರೆದೊಯ್ಯುವ ಕಾರ್ಯ ಆರಂಭವಾಗಿದೆ ಎಂದು ಮಾಹಿತಿ ನೀಡಿದರು. ಸುಪ್ರೀಂ ಕೋರ್ಟ್‌ನ ಸೂಚನೆ ನಂತರ ರಾಜ್ಯದ ಸಿಎಂ ಅವರ ಈ ಹೇಳಿಕೆ ಮುನ್ನೆಲೆಗೆ ಬಂದಿದೆ. ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಹಲವು ಮಂದಿ ಬಲಿಯಾಗಿದ್ದು, ರಾಜ್ಯದಲ್ಲಿ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.

ರಾಜ್ಯ ಸರ್ಕಾರ ಮತ್ತು ಕೇಂದ್ರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಹಿಂಸಾಚಾರದಿಂದ ಸಂತ್ರಸ್ತರಾಗಿರುವ ಜನರ ಪುನರ್ವಸತಿ ಪ್ರಯತ್ನಗಳನ್ನು ವೇಗಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿತ್ತು. ಮಣಿಪುರದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಾಜುಡ್ ನೇತೃತ್ವದ ಪೀಠದ ಮುಂದೆ ಹೇಳಲಾಗಿದ್ದು, ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಕೇಂದ್ರ ಹೇಳಿದೆ.

ಮಣಿಪುರದಲ್ಲಿ ಬುಧವಾರ ಬುಡಕಟ್ಟು ಜನಾಂಗದವರು ರಾಜ್ಯದ ಹತ್ತು ಬೆಟ್ಟಗಳ ಜಿಲ್ಲೆಯಲ್ಲಿ ಮೇತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್‌ಟಿ) ಸ್ಥಾನಮಾನದ ಬೇಡಿಕೆಯ ವಿರುದ್ಧ ಪ್ರತಿಭಟನೆ ನಡೆಸಿದಾಗ ಜಾತಿ ಘರ್ಷಣೆ ಶುರುವಾಯಿತು. ಈ ಸಂಘರ್ಷದ ಸಮಯದಲ್ಲಿ, 23000 ಜನರು ಸ್ಥಳಾಂತರಗೊಂಡಿದ್ದಾರೆ. ಮಣಿಪುರದ ಒಟ್ಟು ಜನಸಂಖ್ಯೆಯ ಶೇಕಡ 53ರಷ್ಟನ್ನು ಮೇತಿ ಸಮುದಾಯ ಹೊಂದಿದೆ. ಈ ಸಮುದಾಯವು ಹೆಚ್ಚಾಗಿ ಇಂಫಾಲ್ ಕಣಿವೆಯ ಸುತ್ತ ವಾಸಿಸುತ್ತಿದೆ. ಅದೇ ಸಮಯದಲ್ಲಿ, ಬುಡಕಟ್ಟು ಜನಾಂಗದ ನಾಗಾ ಮತ್ತು ಕುಕಿ ಬೆಟ್ಟಗಳ ಜಿಲ್ಲೆಯಲ್ಲಿ ವಾಸಿಸುವ ಮಣಿಪುರದ ಜನಸಂಖ್ಯೆಯ ಸುಮಾರು 40 ಪ್ರತಿಶತವನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT