ತಿಹಾರ್ ಜೈಲಿನಲ್ಲಿ ಹತ್ಯೆ 
ದೇಶ

ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು

ಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಚೆನ್ನೈ: ಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ದೆಹಲಿ ತಿಹಾರ್ ಜೈಲಿನಲ್ಲಿ  ಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯನ್ನು ಇರಿದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಡಿಜಿಪಿ ಅಂದು ತಿಹಾರ್ ಜೈಲಿನಲ್ಲಿ ಕರ್ತವ್ಯ ನಿಯೋಜನೆಯಾಗಿದ್ದ 7 ಮಂದಿ ತಮಿಳುನಾಡು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ತಿಹಾರ್ ಜೈಲಿನ ಆವರಣದಲ್ಲಿ ತಿಲ್ಲು ತಾಜ್‌ಪುರಿಯನನ್ನು ದುಷ್ಕರ್ಮಿಗಳು ಹತ್ಯೆ ಮಾಡುತ್ತಿದ್ದಾಗ ಅಲ್ಲಿಯೇ ಕರ್ತವ್ಯ ನಿಯೋಜನೆಯಲ್ಲಿದ್ದ ತಮಿಳುನಾಡು ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ಇದೇ ಕಾರಣಕ್ಕಾಗಿ ಕರ್ತವ್ಯಲೋಪ ಆರೋಪದ ಮೇರೆಗೆ 7 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ ಎಂದು ತಿಹಾರ್  ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

 ಈ ಹಿಂದೆ ದೆಹಲಿ ಕಾರಾಗೃಹಗಳ ಮಹಾನಿರ್ದೇಶಕ ಸಂಜಯ್ ಬೇನಿವಾಲ್ ತನ್ನ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಪೊಲೀಸರಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತಮಿಳುನಾಡು ಪೊಲೀಸರ ಅಮಾನತಾಗಿದೆ.

ತಮ್ಮ ಸಿಬ್ಬಂದಿಯ ಕಡೆಯಿಂದ ಆಪಾದಿತ ನಿರ್ಲಕ್ಷ್ಯದ ಬಗ್ಗೆ ಟಿಎನ್‌ಎಸ್‌ಪಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರು ತಮ್ಮ ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ತಮಿಳುನಾಡು ಪೊಲೀಸ್ ಇಲಾಖೆ ಈಗ ತನ್ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ ಮತ್ತು ಅವರನ್ನು ಹಿಂದಕ್ಕೆ ಕರೆಸಿಕೊಂಡಿದೆ. ಘಟನೆ ನಡೆದ ಸೆಲ್ ಸಂಖ್ಯೆ ಎಂಟರಲ್ಲಿ ಟಿಎನ್‌ಎಸ್‌ಪಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಟಿಎನ್‌ಎಸ್‌ಪಿ ತಿಹಾರ್ ಜೈಲಿನ ಆವರಣದಲ್ಲಿ ಭದ್ರತೆಯನ್ನು ಒದಗಿಸುತ್ತದೆ. ಆದರೆ ಅಂದು ನಡೆದ ಹತ್ಯಾ ಪ್ರಕರಣದಲ್ಲಿ ಈ 7 ಮಂದಿ ಪೊಲೀಸ್ ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದರು. ಇದಕ್ಕೆ ಪುಷ್ಟಿ ನೀಡುವ ಕೆಲ ಸಿಸಿಟಿವಿ ವಿಡಿಯೋಗಳು ಕೂಡ ತಮಿಳುನಾಡು ಪೊಲೀಸ್ ವರಿಷ್ಠಾಧಿಕಾರಿಗಳ ಕೈ ಸೇರಿತ್ತು. ಹೀಗಾಗಿ 7 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕಳೆದ ಮಂಗಳವಾರ ಬೆಳಗ್ಗೆ ಹೆಚ್ಚಿನ ಭದ್ರತೆಯ ಜೈಲಿನೊಳಗೆ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ತಾಜ್‌ಪುರಿಯ ಮೇಲೆ ಸುಧಾರಿತ ಆಯುಧಗಳಿಂದ ಹಲ್ಲೆ ನಡೆಸಿದ್ದರು. ಆದರೆ ಆತ ಜೀವಂತವಾಗಿದ್ದು, ಸೆರೆಮನೆಯ ಭದ್ರತಾ ಸಿಬ್ಬಂದಿ ಆತನನ್ನು ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಎರಡನೇ ಬಾರಿಗೆ ದಾಳಿ ನಡೆಸಿ ಆತನಿಗೆ ಚಾಕು ಇರಿದಿದ್ದರು. ದಾಳಿಕೋರರು ದರೋಡೆಕೋರರ ಮೇಲೆ ದಾಳಿ ನಡೆಸುತ್ತಿರುವಾಗ ಭದ್ರತಾ ಸಿಬ್ಬಂದಿ ಮೂಕ ಪ್ರೇಕ್ಷಕರಾಗಿ ಉಳಿದಿರುವುದು ದೃಶ್ಯಾವಳಿಗಳಲ್ಲಿ ಕಂಡುಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!