ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಏನಾದರೂ ಆದರೆ, ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೊಲ್ಕೋತಾ: ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಶಾನ್ಯ ರಾಜ್ಯವನ್ನು ಬೆಚ್ಚಿಬೀಳಿಸಿದ ಹಿಂಸಾಚಾರದ ಬಗ್ಗೆ ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ, "ಬಂಗಾಳ ಸರ್ಕಾರವನ್ನು ದೂಷಿಸಲು" ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ. ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ, ನಮ್ಮ ಮಾನಹಾನಿ ಮಾಡಲು ನೂರಾರು ಕೇಂದ್ರ ತಂಡಗಳನ್ನು ಇಲ್ಲಿಗೆ ಕಳುಹಿಸಲಾಗುತ್ತದೆ. ಆದರೆ ಮಣಿಪುರ ಬಿಜೆಪಿ ಆಡಳಿತದ ರಾಜ್ಯವಾಗಿರುವುದರಿಂದ ಏನೂ ಮಾಡಲಾಗುತ್ತಿಲ್ಲ. ಆದರೆ ಜನರು ಅಂಕಿಅಂಶಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಕಂಡಲ್ಲಿ ಗುಂಡಿಕ್ಕುವ ಆದೇಶ ಮತ್ತು ಸಾಮಾನ್ಯ ಹಿಂಸಾಚಾರದಿಂದಾಗಿ ಎಷ್ಟು ಜನರು ಸಾವನ್ನಪ್ಪಿದ್ದಾರೆಂದು ನಮಗೆ ತಿಳಿದಿಲ್ಲ. ರಾಜ್ಯ ಸರಕಾರ ಅಂಕಿ ಅಂಶಗಳನ್ನು ಹೇಳುತ್ತಿಲ್ಲ. ಕೆಲವು ಸಮಯದ ಹಿಂದೆ ಅಲ್ಲಿ 60-70 ಸಾವುಗಳಾಗಿದೆ ಎಂದು ತಿಳಿದುಕೊಂಡೆ ಎಂದು ಮಮತಾ ಹೇಳಿದರು.

ಕಳೆದ ವಾರ ಮೈತೈ ಸಮುದಾಯದ ಸದಸ್ಯರು ಮತ್ತು ಬುಡಕಟ್ಟು ಜನಾಂಗದವರ ನಡುವೆ ಘರ್ಷಣೆ ನಡೆದ ನಂತರ ಮಣಿಪುರದಲ್ಲಿ ಅಸ್ಥಿರ ಪರಿಸ್ಥಿತಿಯ ಬಗ್ಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT