ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ 
ದೇಶ

ಬಾಲ್ಯ ವಿವಾಹ ನಿಷೇಧದ ಬಳಿಕ ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಮುಂದು

ಬಹುಪತ್ನಿತ್ವವನ್ನು ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವಿದೆಯೇ? ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. 

ಗುವಾಹಟಿ: ಬಹುಪತ್ನಿತ್ವವನ್ನು ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವಿದೆಯೇ? ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. 
    
ಸಮಿತಿಯು ಕಾನೂನು ತಜ್ಞರನ್ನು ಹೊಂದಿರಲಿದ್ದು, ಏಕರೂಪ ನಾಗರಿಕ ಸಂಹಿತೆಗಾಗಿ ರಾಜ್ಯ ನೀತಿಯ ನಿರ್ದೇಶನ ತತ್ವಕ್ಕೆ ಸಂಬಂಧಿಸಿದಂತೆ  ದೇಶದ ಸಂವಿಧಾನದ 25 ನೇ ವಿಧಿಯೊಂದಿಗೆ ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ, 1937 ರ ನಿಬಂಧನೆಗಳನ್ನು ಪರಿಶೀಲನೆ ನಡೆಸುತ್ತದೆ.

ಅಸ್ಸಾಂ ನಲ್ಲಿ ಬಹುಪತ್ನಿತ್ವದ ಪ್ರಮಾಣ ಎಷ್ಟಿದೆ ಎಂಬ ಬಗ್ಗೆ ಹಿಮಂತ ಬಿಸ್ವ ಶರ್ಮಾ ಅಂಕಿ-ಅಂಶಗಳನ್ನು ಬಹಿರಂಗಪಡಿಸಿಲ್ಲವಾದರೂ, "ದಕ್ಷಿಣ ಅಸ್ಸಾಂ ನ ಬರಕ್ ಕಣಿವೆ ಹಾಗೂ ಕೇಂದ್ರ ಅಸ್ಸಾಂ ನಲ್ಲಿ ಹಲವು ಪ್ರಕರಣಗಳಿದ್ದು, ದೇಶೀಯ ಮುಸ್ಲಿಮರಲ್ಲಿ ಹಾಗೂ ಶಿಕ್ಷಣವಿರುವವರಲ್ಲಿ ಬಹುಪತ್ನಿತ್ವ ಇಲ್ಲವೇ ಇಲ್ಲ ಎನ್ನುವ ಪರಿಸ್ಥಿತಿ ಇದೆ" ಎಂದು ಸಿಎಂ ಹೇಳಿದ್ದಾರೆ. 

"ಬಾಲ್ಯವಿವಾಹದ ವಿರುದ್ಧ ಕ್ರಮ ಕೈಗೊಂಡ ಸಮಯದಲ್ಲಿ, ಬಹುಪತ್ನಿತ್ವದ ಬಹಳಷ್ಟು ಪ್ರಕರಣಗಳು ಇವೆ ಎಂಬುದು ನಮ್ಮ ಗಮನಕ್ಕೆ ಬಂದಿತ್ತು. 60-65 ವರ್ಷ ವಯಸ್ಸಿನವರಲ್ಲಿ ಮತ್ತು ಸಮಾಜದಲ್ಲಿ ಪ್ರಭಾವಶಾಲಿಯಾದವರಲ್ಲಿಯೂ ನಾವು ಬಹುಪತ್ನಿತ್ವ ಪ್ರಕರಣಗಳನ್ನು ಕಂಡುಕೊಂಡಿದ್ದೇವೆ" ಎಂದು ಶರ್ಮಾ ಹೇಳಿದ್ದಾರೆ.

ಬಾಲ್ಯವಿವಾಹದ ಕಡಿವಾಣವೊಂದೇ ಪರಿಹಾರವಲ್ಲ, ಬಾಲ್ಯವಿವಾಹದ ಅಂಕಿ-ಅಂಶಗಳನ್ನು ಪರಿಶೀಲಿಸಿದ ನಂತರ ಬಹುಪತ್ನಿತ್ವವನ್ನು ನಿಷೇಧಿಸುವುದು ಕೂಡ ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ ಎಂದು ಬಿಸ್ವ ಶರ್ಮಾ ಹೇಳಿದ್ದಾರೆ. 

"ನಾವು ನಮ್ಮೊಂದಿಗೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಯಸುತ್ತೇವೆ. ನಾವು ಇಸ್ಲಾಮಿಕ್ ವಿದ್ವಾಂಸರು, ಬುದ್ಧಿಜೀವಿಗಳು ಮತ್ತು ವ್ಯಕ್ತಿಗಳೊಂದಿಗೆ ಚರ್ಚಿಸಲು ಬಯಸುತ್ತೇವೆ, ಇದರಿಂದಾಗಿ ಇದು ಪ್ರಚೋದನೆಗಿಂತ ಹೆಚ್ಚು ಒಮ್ಮತವನ್ನು ನಿರ್ಮಿಸುವ ಚಟುವಟಿಕೆಯಾಗಬಹುದು" ಎಂದು ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT