ಕೇರಳ ದೋಣಿ ದುರಂತ 
ದೇಶ

Kerala boat accident: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್, ಪೊಲೀಸ್ ಎಸ್ಐಟಿ ತಂಡ ರಚನೆ

ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

ಮಲಪ್ಪುರಂ: ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

22 ಮಂದಿಯ ಸಾವಿಗೆ ಕಾರಣವಾದ ಕೇರಳದ ಮಲಪ್ಪುರಂನ ತನೂರ್ ದೋಣಿ ದುರಂತದ ಕುರಿತು ಕೇರಳ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. "ಅಧಿಕಾರಿಗಳು ಎಲ್ಲಿದ್ದಾರೆ? ಅವರು ಏನು ಮಾಡುತ್ತಿದ್ದರು ಎಂದು ದೋಣಿ ಅಪಘಾತದ ಬಗ್ಗೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ದ ಚಾಟಿ ಬೀಸಿದೆ.

ಅಪಘಾತವು ಆಘಾತಕಾರಿ ಮತ್ತು ಕಾಡುವ ಸಂಗತಿಯಾಗಿದೆ ಮತ್ತು ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಭಾನುವಾರ ರಾತ್ರಿ 7.30ರ ಸುಮಾರಿಗೆ ತನೂರಿನ ತೂವಲ್ತೀರಂ ಕಡಲತೀರದ ಸಮೀಪವಿರುವ ಅಳಿವೆ ಬಳಿ ದೋಣಿ ಮಗುಚಿ ಬಿದ್ದಿದ್ದು, ಜಿಲ್ಲೆಯ ಅಧಿಕಾರಿಗಳ ದುರಂತದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಎಂಟು ತಿಂಗಳ ಮಗು ಸೇರಿ 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕರು ಸೇರಿದಂತೆ ದೋಣಿಯಲ್ಲಿ 37 ಮಂದಿ ಇದ್ದರು ಎಂದು ಹೇಳಲಾಗಿದೆ.

ತನಿಖೆಗೆ ಎಸ್‌ಐಟಿ ರಚನೆ: ಕೇರಳ ಪೊಲೀಸ್
ಇನ್ನು ಭಾನುವಾರ ಸಂಜೆ ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದಲ್ಲಿ 22 ಜನರನ್ನು ಬಲಿತೆಗೆದುಕೊಂಡ ದುರಂತ ದೋಣಿ ದುರಂತದ ತನಿಖೆಗಾಗಿ ಕೇರಳ ಪೊಲೀಸರು ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಅವರನ್ನು ತಂಡದ ಮುಖ್ಯಸ್ಥರಾಗಿ ವಹಿಸಿ ಆದೇಶ ಹೊರಡಿಸಿದ್ದಾರೆ.

ತನೂರ್ ಡಿವೈಎಸ್ಪಿ ವಿ ವಿ ಬೆನ್ನಿ, ತಾನೂರು ಠಾಣಾಧಿಕಾರಿ ಜೀವನ್ ಜಾರ್ಜ್ ಮತ್ತು ಕೊಂಡೊಟ್ಟಿ ಎಎಸ್ಪಿ ವಿಜಯ ಭರತ್ ರೆಡ್ಡಿ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಉತ್ತರ ವಲಯದ ಐಜಿ ನೀರಜ್ ಕುಮಾರ್ ಗುಪ್ತಾ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ ಎಂದು ಅದು ಹೇಳಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಡಿಜಿಪಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT