ಕೇರಳ ದೋಣಿ ದುರಂತ 
ದೇಶ

Kerala boat accident: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್, ಪೊಲೀಸ್ ಎಸ್ಐಟಿ ತಂಡ ರಚನೆ

ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

ಮಲಪ್ಪುರಂ: ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

22 ಮಂದಿಯ ಸಾವಿಗೆ ಕಾರಣವಾದ ಕೇರಳದ ಮಲಪ್ಪುರಂನ ತನೂರ್ ದೋಣಿ ದುರಂತದ ಕುರಿತು ಕೇರಳ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. "ಅಧಿಕಾರಿಗಳು ಎಲ್ಲಿದ್ದಾರೆ? ಅವರು ಏನು ಮಾಡುತ್ತಿದ್ದರು ಎಂದು ದೋಣಿ ಅಪಘಾತದ ಬಗ್ಗೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ದ ಚಾಟಿ ಬೀಸಿದೆ.

ಅಪಘಾತವು ಆಘಾತಕಾರಿ ಮತ್ತು ಕಾಡುವ ಸಂಗತಿಯಾಗಿದೆ ಮತ್ತು ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಭಾನುವಾರ ರಾತ್ರಿ 7.30ರ ಸುಮಾರಿಗೆ ತನೂರಿನ ತೂವಲ್ತೀರಂ ಕಡಲತೀರದ ಸಮೀಪವಿರುವ ಅಳಿವೆ ಬಳಿ ದೋಣಿ ಮಗುಚಿ ಬಿದ್ದಿದ್ದು, ಜಿಲ್ಲೆಯ ಅಧಿಕಾರಿಗಳ ದುರಂತದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಎಂಟು ತಿಂಗಳ ಮಗು ಸೇರಿ 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕರು ಸೇರಿದಂತೆ ದೋಣಿಯಲ್ಲಿ 37 ಮಂದಿ ಇದ್ದರು ಎಂದು ಹೇಳಲಾಗಿದೆ.

ತನಿಖೆಗೆ ಎಸ್‌ಐಟಿ ರಚನೆ: ಕೇರಳ ಪೊಲೀಸ್
ಇನ್ನು ಭಾನುವಾರ ಸಂಜೆ ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದಲ್ಲಿ 22 ಜನರನ್ನು ಬಲಿತೆಗೆದುಕೊಂಡ ದುರಂತ ದೋಣಿ ದುರಂತದ ತನಿಖೆಗಾಗಿ ಕೇರಳ ಪೊಲೀಸರು ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಅವರನ್ನು ತಂಡದ ಮುಖ್ಯಸ್ಥರಾಗಿ ವಹಿಸಿ ಆದೇಶ ಹೊರಡಿಸಿದ್ದಾರೆ.

ತನೂರ್ ಡಿವೈಎಸ್ಪಿ ವಿ ವಿ ಬೆನ್ನಿ, ತಾನೂರು ಠಾಣಾಧಿಕಾರಿ ಜೀವನ್ ಜಾರ್ಜ್ ಮತ್ತು ಕೊಂಡೊಟ್ಟಿ ಎಎಸ್ಪಿ ವಿಜಯ ಭರತ್ ರೆಡ್ಡಿ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಉತ್ತರ ವಲಯದ ಐಜಿ ನೀರಜ್ ಕುಮಾರ್ ಗುಪ್ತಾ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ ಎಂದು ಅದು ಹೇಳಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಡಿಜಿಪಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT