ನಿತೀಶ್ ಕುಮಾರ್-ನವೀನ್ ಪಟ್ನಾಯಕ್ ಭೇಟಿ 
ದೇಶ

ಕುತೂಹಲ ಮೂಡಿಸಿದ ನವೀನ್- ನಿತೀಶ್ ಭೇಟಿ; ವಿಪಕ್ಷಗಳ ಒಕ್ಕೂಟದ ಬಗ್ಗೆ ಪಟ್ನಾಯಕ್ ಹೇಳಿದ್ದು ಹೀಗೆ...

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಕ್ಕೂಟ ರಚಿಸುವ ಪ್ರಯತ್ನದ ಭಾಗವಾಗಿ ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒಡಿಶಾ ಸಿಎಂ, ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದರು. 

ಭುವನೇಶ್ವರ್: 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಕ್ಕೂಟ ರಚಿಸುವ ಪ್ರಯತ್ನದ ಭಾಗವಾಗಿ ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒಡಿಶಾ ಸಿಎಂ, ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದರು. 

ಇತ್ತೀಚೆಗೆ ನಿತೀಶ್ ಕುಮಾರ್ ಹಾಗೂ ಅವರ ಸರ್ಕಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು. ಮಮತಾ ಬ್ಯಾನರ್ಜಿ ಕೆಲವು ದಿನಗಳ ಹಿಂದೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.

ನಿತೀಶ್ ಕುಮಾರ್ ನವೀನ್ ಪಟ್ನಾಯಕ್ ಅವರ ಬಳಿ ವೈಯಕ್ತಿಕ ಸಂಬಂಧಕ್ಕೆ ಒತ್ತು ನೀಡಿದ್ದು, ರಾಜಕೀಯ ಚರ್ಚೆಗಳ ಬಗ್ಗೆ ಹೆಚ್ಚಿನ ಚಿಂತೆ ಅನಗತ್ಯ ಎಂದು ಹೇಳಿದ್ದಾರೆ ಅಷ್ಟೇ ಅಲ್ಲದೇ ಪಟ್ನಾಯಕ್ ಸಹ ಈ ಭೇಟಿಯ ವೇಳೆ ಮೈತ್ರಿ ವಿಚಾರವಾಗಿ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಹೇಳಿದ್ದಾರೆ. 

ನಮ್ಮದು ಎಲ್ಲರಿಗೂ ತಿಳಿದಿರುವಂತೆ ಅತ್ಯುತ್ತಮ ಗೆಳೆತನವಾಗಿದೆ, ಹಲವು ವರ್ಷಗಳ ಹಿಂದೆ ನಾವಿಬ್ಬರೂ ಸಹೋದ್ಯೋದಿಗಳಾಗಿದ್ದೆವು (ವಾಜಪೇಯಿ ಸರ್ಕಾರ) ಇವತ್ತಿನ ಭೇಟಿಯಲ್ಲಿ ಮೈತ್ರಿಯ ವಿಚಾರವಾಗಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ಒಡಿಶಾ ಸಿಎಂ ಹೇಳಿದ್ದಾರೆ. ನವೀನ್ ಪಟ್ನಾಯಕ್ ಬಿಜೆಪಿ ಹಾಗೂ ಕಾಂಗ್ರೆಸ್ ನ ಯಾವುದೇ ಮೈತ್ರಿಕೂಟಕ್ಕೆ ಸೇರದೇ ತಟಸ್ಥವಾಗಿದ್ದಾರೆ.  ಈಗ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿರುವುದು ಕೂತೂಹಲ ಮೂಡಿಸಿದೆ. ಮೇ.18 ರಂದು ವಿಪಕ್ಷಗಳ ನಾಯಕರ ಸಭೆಯನ್ನು ಆಯೋಜಿಸಲು ನಿತೀಶ್ ಕುಮಾರ್ ಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT