ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ 
ದೇಶ

ಕೇಂದ್ರ-ದೆಹಲಿ ಸರ್ಕಾರ ನಡುವೆ ಅಧಿಕಾರ ಹಂಚಿಕೆ ವಿವಾದ: ಸುಪ್ರೀಂ ತೀರ್ಪು ಕಠಿಣ ಸಂದೇಶ ಎಂದ ಎಎಪಿ

ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿದ ಆಡಳಿತರೂಢ ಎಎಪಿ, ಇದು "ದೊಡ್ಡ ಗೆಲುವು" ಎಂದು  ಗುರುವಾರ ಶ್ಲಾಘಿಸಿದೆ.

ನವದೆಹಲಿ: ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿದ ಆಡಳಿತರೂಢ ಎಎಪಿ, ಇದು "ದೊಡ್ಡ ಗೆಲುವು" ಎಂದು  ಗುರುವಾರ ಶ್ಲಾಘಿಸಿದೆ.

ಸರ್ವಾನುಮತದ ತೀರ್ಪಿನಲ್ಲಿ, ದೆಹಲಿ ಸರ್ಕಾರ, ಸೇವೆಗಳ ಮೇಲೆ ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ತೀರ್ಪನ್ನು ಸ್ವಾಗತಿಸಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಎಎಪಿ, "ಚುನಾಯಿತ ಸರ್ಕಾರಕ್ಕೆ ಅಧಿಕಾರಿಗಳ ವರ್ಗಾವಣೆ-ಪೋಸ್ಟ್ ಮಾಡುವ ಅಧಿಕಾರವಿರುತ್ತದೆ. ಅಧಿಕಾರಿಗಳು ಚುನಾಯಿತ ಸರ್ಕಾರದ ಮೂಲಕ ಮಾತ್ರ ಕೆಲಸ ಮಾಡುತ್ತಾರೆ" ಎಂದು ಹೇಳಿದೆ.

ದೆಹಲಿಯ ಜನರ ಕೆಲಸ ಮಾಡುವ ಅಧಿಕಾರಿಗಳನ್ನು ತಡೆಯುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಆಡಳಿತ ಪಕ್ಷ ಹೇಳಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು "ಐತಿಹಾಸಿಕ ನಿರ್ಧಾರ" ಎಂದು ಕರೆದಿರುವ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರು, ಇದು ಕೇಂದ್ರಕ್ಕೆ ಕಠಿಣ ಸಂದೇಶವನ್ನು ರವಾನಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT