ಸಂಗ್ರಹ ಚಿತ್ರ 
ದೇಶ

ದೆಹಲಿ v/s ಕೇಂದ್ರ: ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅರವಿಂದ ಕೇಜ್ರಿವಾಲ್ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅರವಿಂದ ಕೇಜ್ರಿವಾಲ್ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ಅಧಿಕಾರ ಹೊಂದಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ.

ಈ ಸಂದರ್ಭದಲ್ಲಿ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣ ಕೇಂದ್ರ ಸರ್ಕಾರದ ಬಳಿ ಇರಬೇಕಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಇರುವುದರ ಉದ್ದೇಶವೇನು ಎಂದು ಪ್ರಶ್ನಿಸಿತು.

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ವಿವಾದದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ.

ತೀರ್ಪು ಪ್ರಕಟಿಸುವ ಮುನ್ನ ಸಿಜೆಐ, ಎಲ್ಲ ನ್ಯಾಯಾಧೀಶರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸರ್ಕಾರವು ಅಧಿಕಾರಿಗಳನ್ನು ನೇಮಕ ಮಾಡುವ ಮತ್ತು ವರ್ಗಾವಣೆ ಮಾಡುವ ಹಕ್ಕನ್ನು ಹೊಂದಿರುತ್ತದೆ, ಅದೇ ರೀತಿ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಸಂಬಂಧಿತ ಅಧಿಕಾರಗಳು ಕೇಂದ್ರದ ಬಳಿ ಇರುತ್ತವೆ ಎಂದು ತಿಳಿಸಿದೆ.

ರಾಷ್ಟ್ರಪತಿಗಳು ಸೂಚಿಸಿದಂತೆ ಆಡಳಿತಾತ್ಮಕ ಪಾತ್ರದ ಅಡಿಯಲ್ಲಿ ಲೆಪ್ಟಿನೆಂಟ್ ಗವರ್ನರ್ ಅಧಿಕಾರ ಚಲಾಯಿಸಬೇಕು. ಕಾರ್ಯನಿರ್ವಾಹಕ ಆಡಳಿತ. ಶಾಸಕಾಂಗ ಸಭೆಯ ಹೊರಗೆ ಬೀಳುವ ವಿಷಯಗಳಿಗೆ ಮಾತ್ರ ಕೈ ಹಾಕಬಾರದು. ಇಲ್ಲದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸಂಸ್ಥೆ ಹೊಂದುವ ಉದ್ದೇಶ ನಿರರ್ಥಕವಾಗುತ್ತದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವು ತನ್ನ ಅಧಿಕಾರಿಗಳ ಮೇಲೆ ನಿಯಂತ್ರಣವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರ ತನ್ನ ಅಧಿಕಾರಿಗಳನ್ನು ನಿಯಂತ್ರಿಸಲು ಆಗದಿದ್ದರೆ ಶಾಸಕಾಂಗ ಮತ್ತು ಸಾರ್ವಜನಿಕರ ಕಡೆಗೆ ಅದರ ಜವಾಬ್ದಾರಿ ದುರ್ಬಲಗೊಳಿಸಲಾಗುತ್ತದೆ. “ಒಬ್ಬ ಅಧಿಕಾರಿ ಸರ್ಕಾರಕ್ಕೆ ಪ್ರತಿಕ್ರಿಯಿಸದಿದ್ದರೆ ಸಾಮೂಹಿಕ ಜವಾಬ್ದಾರಿ ದುರ್ಬಲಗೊಳಿಸಲಾಗುತ್ತದೆ.. ಒಬ್ಬ ಅಧಿಕಾರಿಯು ಚುನಾಯಿತ ಸರ್ಕಾರದಿಂದ ಪ್ರತ್ಯೇಕಿಸಲ್ಪಟ್ಟಿದೆ ಎಂದು ಭಾವಿಸಿದರೆ ಅವರು ಜವಾಬ್ದಾರರಲ್ಲ ಎಂದು ಅವರು ಭಾವಿಸುತ್ತಾರೆ” ಎಂದು ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿದ್ದ ಪೀಠ ಹೇಳಿದೆ.

“ಜನರ ಇಚ್ಛೆಯನ್ನು ಪ್ರತಿನಿಧಿಸಲು ದೆಹಲಿ ವಿಧಾನಸಭೆಗೆ ಶಾಸನ ಮಾಡಲು ಅಧಿಕಾರವನ್ನು ನೀಡಲಾಗಿದೆ. ಪ್ರಜಾಪ್ರಭುತ್ವದ ತತ್ವ ಮತ್ತು ಒಕ್ಕೂಟ ವ್ಯವಸ್ಥೆ ಮೂಲಭೂತ ರಚನೆಯ ಒಂದು ಭಾಗವಾಗಿದೆ. ಅದನ್ನು ಉಲ್ಲಂಘಿಸುವುದು ಸರಿಯಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT