ಸಾಂದರ್ಭಿಕ ಚಿತ್ರ 
ದೇಶ

ಫೋಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ನಾಲ್ವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಬರೇಲಿಯ ಫರೀದ್‌ಪುರ ಪ್ರದೇಶದಲ್ಲಿನ ಫೋಮ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬರೇಲಿ: ಇಲ್ಲಿನ ಫರೀದ್‌ಪುರ ಪ್ರದೇಶದಲ್ಲಿನ ಫೋಮ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅವರ ಪ್ರಕಾರ, ಕಾರ್ಖಾನೆಯ ಕಾರ್ಮಿಕರ ದೈನಂದಿನ ಪಾಳಿ ಮುಗಿಯುವ ಮೊದಲು ಶಾರ್ಟ್ ಸರ್ಕ್ಯೂಟ್‌ನಿಂದ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು ಎಂದು ಫರೀದ್‌ಪುರ ವೃತ್ತದ ಅಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.

ಘಟನೆಯ ವೇಳೆ ಕಾರ್ಖಾನೆಯೊಳಗೆ ಸುಮಾರು 50 ಮಂದಿ ಇದ್ದರು ಎಂದು ಕಾರ್ಮಿಕರು ಹೇಳಿದ್ದಾರೆ.

ಬೆಂಕಿ ಸಂಪೂರ್ಣವಾಗಿ ಆರಿದ ನಂತರವೇ ನಾಲ್ವರ ಸುಟ್ಟ ದೇಹಗಳನ್ನು ಹೊರತೆಗೆಯಲಾಯಿತು. ಅವರಲ್ಲಿ ಮೂವರನ್ನು ಅನುಪ್ (25), ಅರವಿಂದ್ ಕುಮಾರ್ ಮಿಶ್ರಾ (32) ಮತ್ತು ರಾಕೇಶ್ (27) ಎಂದು ಗುರುತಿಸಲಾಗಿದ್ದು, ನಾಲ್ಕನೇ ಮೃತರ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದರು.

ನಾಲ್ವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿದ್ದು, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಸಿಂಗ್ ಹೇಳಿದರು. 

ಘಟನೆ ಕುರಿತು ತಾಂತ್ರಿಕ ತನಿಖೆ ನಡೆಸುವಂತೆ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ ಅವರಿಗೆ ಆದೇಶ ನೀಡಿರುವುದಾಗಿ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಕಾಂತ್ ದ್ವಿವೇದಿ ತಿಳಿಸಿದ್ದಾರೆ.

ಫೋಮ್ ಕಾರ್ಖಾನೆಯು ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿಮೀ ದೂರದಲ್ಲಿರುವ ಫರೀದ್‌ಪುರದ ಜೇಡ್ ಗ್ರಾಮದಲ್ಲಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT