ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಆರ್ ಬಿ ರಾಜಾ 
ದೇಶ

ಸ್ಟಾಲಿನ್ ಸಂಪುಟ ಪುನರ್ರಚನೆ: ಪಿಟಿಆರ್ ಗೆ ಐಟಿ, ತಂಗಂ ತೆನ್ನರಸು ನೂತನ ಹಣಕಾಸು ಸಚಿವ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ತಮ್ಮ ಸಂಪುಟವನ್ನು ಪುನಾ ರಚನೆ ಮಾಡಿದ್ದು, ಸಚಿವ ಪಳನಿವೇಲ್ ತ್ಯಾಗ ರಾಜನ್(ಪಿಟಿಆರ್) ಅವರ ಬಳಿ ಇದ್ದ ಹಣಕಾಸು ಖಾತೆಯನ್ನು ಹಿಂಪಡೆದು, ತಂಗಂ ತೆನ್ನರಸು ಅವರನ್ನು ಹೊಸ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ತಮ್ಮ ಸಂಪುಟವನ್ನು ಪುನಾ ರಚನೆ ಮಾಡಿದ್ದು, ಸಚಿವ ಪಳನಿವೇಲ್ ತ್ಯಾಗ ರಾಜನ್(ಪಿಟಿಆರ್) ಅವರ ಬಳಿ ಇದ್ದ ಹಣಕಾಸು ಖಾತೆಯನ್ನು ಹಿಂಪಡೆದು, ತಂಗಂ ತೆನ್ನರಸು ಅವರನ್ನು ಹೊಸ ಹಣಕಾಸು ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಪಿಟಿಆರ್ ಅವರಿಗೆ ಮಾಹಿತಿ ತಂತ್ರಜ್ಞಾನ ಖಾತೆ ಹಂಚಿಕೆ ಮಾಡಿದ್ದಾರೆ.

ನಿರೀಕ್ಷೆಯಂತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಆರ್ ಬಿ ರಾಜಾ ಅವರಿಗೆ ಕೈಗಾರಿಕೆ ಖಾತೆ ನೀಡಲಾಗಿದೆ. ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿದ್ದ ಎಸ್‌ಎಂ ನಾಸರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಅವರ ಖಾತೆಯನ್ನು ಟಿ ಮನೋ ತಂಗರಾಜ್ ಅವರಿಗೆ ನೀಡಲಾಗಿದೆ.

ಇದನ್ನು ಓದಿ: ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು
 
ವಾರ್ತಾ ಸಚಿವ ಎಂಪಿ ಸಾಮಿನಾಥನ್ ಅವರಿಗೆ ತಮಿಳು ಅಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಂಗಂ ತೆನ್ನರಸು ಅವರು ಅವರಿಗೆ ಹಣಕಾಸು ಮತ್ತು ಮಾನವ ಸಂಪನ್ಮೂಲ ನಿರ್ವಹಣೆ ಖಾತೆ ಜೊತೆಗೆ ಯೋಜನೆ, ಪಿಂಚಣಿ, ಪಿಂಚಣಿ ಪ್ರಯೋಜನಗಳು, ಅಂಕಿಅಂಶಗಳು ಮತ್ತು ಪುರಾತತ್ತ್ವ ಶಾಸ್ತ್ರ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ