ಸಿಎಂ ನವೀನ್ ಪಟ್ನಾಯಕ್, ಪ್ರಧಾನಿ ಮೋದಿ 
ದೇಶ

2024 ಲೋಕಸಭಾ ಚುನಾವಣೆ: ವಿರೋಧ ಪಕ್ಷಗಳೊಂದಿಗೆ ಮೈತ್ರಿ ಇಲ್ಲ- ನವೀನ್ ಪಟ್ನಾಯಕ್ 

2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. 

ನವದೆಹಲಿ:  2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. 

ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ನವೀನ್ ಪಟ್ನಾಯಕ್, ಇದನ್ನು ಸೌಜನ್ಯದ ಭೇಟಿ ಎಂದರು. ಬಿಜೆಡಿ ತನ್ನ ಸಮಾನವಾದ ನಿಲುವನ್ನು ಉಳಿಸಿಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದಾಗ ಇದು ಯಾವಾಗಲೂ ಇರುವ ಯೋಜನೆಯಾಗಿದೆ ಎಂದರು. 

76 ವರ್ಷದ ಹಿರಿಯ ರಾಜಕಾರಣಿ ನವೀನ್ ಪಟ್ನಾಯಕ್ ಯಾವಾಗಲೂ ಎನ್ ಡಿಎ ಅಥವಾ ಕಾಂಗ್ರೆಸ್ ಯಾವುದೋ ಒಂದು ಪತ್ರಕ್ಕೆ ಬೆಂಬಲ ನೀಡುತ್ತಾರೆ. ಪ್ರಸ್ತುತ ಎನ್ ಡಿಗೆ ಬೆಂಬಲ ನೀಡುತ್ತಿರುವ ಅವರು, ತಮ್ಮ ನಿಲುವು ಶೀಘ್ರದಲ್ಲಿಯೇ ಬದಲಾಗುವುದಿಲ್ಲ ಎಂದು ಹೇಳಿದರು.

ನವೀನ್ ಪಟ್ನಾಯಕ್ ಅವರ ಘೋಷಣೆಯು 2024 ರ ಲೋಕಸಭಾ ಚುನಾವಣೆ ವೇಳೆಗೆ ದೇಶಾದ್ಯಂತ ಬಿಜೆಪಿ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿತೀಶ್ ಕುಮಾರ್ ಅವರ ಪ್ರಯತ್ನಗಳಿಗೆ ಹೊಡೆತವಾಗಿದೆ.

ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭುವನೇಶ್ವರದಿಂದ ಪುರಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚಿಸಲು ಮೋದಿಯನ್ನು ಭೇಟಿಯಾಗಿದ್ದು, ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಪಟ್ನಾಯಕ್ ತಿಳಿಸಿದರು.

ದೆಹಲಿ ಭೇಟಿ ಸಂದರ್ಭದಲ್ಲಿ ಬೇರೆ ಯಾವುದೇ ರಾಜಕೀಯ ಪಕ್ಷಗಳನ್ನು ಭೇಟಿ ಮಾಡುವ ಯೋಜನೆ ಇಲ್ಲ ಎಂದು ಅವರು ಹೇಳಿದರು. ಪಟ್ನಾಯಕ್ ಅವರು ಈ ಹಿಂದೆ ಬಿಜೆಪಿಯ ಕಟು ಟೀಕಾಕಾರರಲ್ಲಿ ಒಬ್ಬರಾದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!