ಸಾಂದರ್ಭಿಕ ಚಿತ್ರ 
ದೇಶ

CBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ

12ನೇ ತರಗತಿ ಫಲಿತಾಂಶ ಪ್ರಕಟ ಬೆನ್ನಲ್ಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ CBSEಯ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.  

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶುಕ್ರವಾರ 10 ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಇದರಲ್ಲಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇಕಡಾ 94.25 ಫಲಿತಾಂಶದೊಂದಿಗೆ ಬಾಲಕಿಯರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದು, ಬಾಲಕರು ಶೇಕಡಾ 92.27ರಷ್ಟು ಮಂದಿ ತೇರ್ಗಡೆ ಹೊಂದಿದ್ದಾರೆ. 10 ನೇ ತರಗತಿ ಪರೀಕ್ಷೆಯಲ್ಲಿ ಸುಮಾರು ಶೇಕಡಾ 90ರಷ್ಟು ತೃತೀಯಲಿಂಗ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ವರ್ಷ ದೇಶಾದ್ಯಂತ 21,65,805 ವಿದ್ಯಾರ್ಥಿಗಳು CBSE 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 20,16,779 ಮಂದಿ ಉತ್ತೀರ್ಣರಾಗಿದ್ದಾರೆ. 1,95,799 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಸಿಬಿಎಸ್‌ಇ ತಿಳಿಸಿದೆ. ಒಟ್ಟು ಶೇಕಡಾ 2 ರಷ್ಟು ವಿದ್ಯಾರ್ಥಿಗಳು (44,297) ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

CBSE ಪ್ರಕಾರ, ತಿರುವನಂತಪುರಂ ಪ್ರದೇಶವು 99.91 ಶೇಕಡಾ ಉತ್ತೀರ್ಣತೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು 99.18 ಶೇಕಡಾದೊಂದಿಗೆ ಎರಡನೇ ಸ್ಥಾನದಲ್ಲಿದೆ. 99.14ರಷ್ಟು ಉತ್ತೀರ್ಣರಾಗುವ ಮೂಲಕ ಚೆನ್ನೈ ವಿಭಾಗ ಮೂರನೇ ಸ್ಥಾನದಲ್ಲಿದೆ.

ಈ ವರ್ಷ 'ವಿಶೇಷ ಅಗತ್ಯವುಳ್ಳ ಮಕ್ಕಳು' ವಿಭಾಗದಲ್ಲಿ 278 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದರೆ, ಈ ವಿಭಾಗದ 58 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಅಲ್ಲದೆ, ಒಟ್ಟು 1,34,774 ವಿದ್ಯಾರ್ಥಿಗಳು ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. CBSE 10ನೇ ತರಗತಿ ಫಲಿತಾಂಶ ನೋಡಲು cbse.gov.in ಮತ್ತು cbse.nic.in ನಲ್ಲಿ ಪರಿಶೀಲಿಸಬಹುದು. 

ಫಲಿತಾಂಶಗಳನ್ನು ಪರಿಶೀಲಿಸಲು cbseresults.nic.in, results.cbse.nic.in, digilocker.gov.in ಮತ್ತು results.gov.in. ವೆಬ್‌ಸೈಟ್‌ಗಳನ್ನು ನೋಡಬಹುದು. ಫಲಿತಾಂಶಗಳನ್ನು ಮೊಬೈಲ್ ಅಪ್ಲಿಕೇಷನ್- ಡಿಜಿಲಾಕರ್ ಮತ್ತು ಉಮಾಂಗ್ ನಲ್ಲಿ ಕೂಡ ನೋಡಬಹುದು. 

ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿ ಅವರ ಮುಂದಿನ ಪಯಣ ಯಶಸ್ವಿಯಾಗಿರಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT