ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಇಂಟರ್ಮೀಡಿಯೆಟ್ ಫಲಿತಾಂಶದಿಂದ ನೊಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!

ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮಂಗಳವಾರ ಎಂ ಪ್ರಜ್ವಲ್ ಮತ್ತು ಏಪ್ರಿಲ್‌ನಲ್ಲಿ ಜಿ ಕೃಷ್ಣ ಅವರ ಆತ್ಮಹತ್ಯೆ ಸೇರಿದಂತೆ ಇಂಟರ್ಮೀಡಿಯೆಟ್ ಪರೀಕ್ಷೆಗೆ ಸಂಬಂಧಿಸಿದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿಯಾದ ಪ್ರಕರಣಗಳಲ್ಲಿ, ಹೈದರಾಬಾದ್‌ನ ಪೊಲೀಸ್ ಕಮಿಷನರ್‌ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದರೆ, ಉಳಿದ ಘಟನೆಗಳನ್ನು ಸಂಗಾರೆಡ್ಡಿಯ ಬಿಡಿಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ವನಪರ್ತಿಯ ಕೊತಕೋಟಾ ಮತ್ತು ಜಗ್ತಿಯಾಲ್ ಜಿಲ್ಲೆಯ ಮೆಡಿಪಲ್ಲಿಯಲ್ಲಿ ದಾಖಲಾಗಿವೆ.

ಮೊದಲ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ಶಾಂತಿ ಕುಮಾರಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಎರಡನೇ ವರ್ಷದ ವಿದ್ಯಾರ್ಥಿನಿ ಹಾಗೂ ಪುಂಜಗುಟ್ಟ ನಿವಾಸಿ ಅಂಬಟಿ ಹರಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT