ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ 
ದೇಶ

ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!

ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. 

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. 

ರಾತ್ರಿ ಔತಣಕೂಟದ ಬಳಿಕ ಶಾಸಕರನ್ನು ಪ್ರತ್ಯೇಕವಾಗಿ ಕರೆಸಿ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ತಟಸ್ಥವಾಗಿರುವವರೂ ತಮ್ಮ ಅಭಿಪ್ರಾಯ ತಿಳಿಸಿ ಎಂದು ಹೈಕಮಾಂಡ್ ಶಾಸಕರಿಗೆ ಸೂಚಿಸಿದ್ದರು. 

ಇದರಂತೆ ಶಾಸಕರು ಸಿಎಂ ಆಯ್ಕೆ ವಿಚಾರವಾಗಿ ಪ್ರತ್ಯೇಕವಾಗಿ ತೆರಳಿ ವೀಕ್ಷಕರೆದುರು ಅಭಿಪ್ರಾಯ ತಿಳಿಸಿದ್ದಾರೆ. 

ಪ್ರಕ್ರಿಯೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ, ಶಾಸಕರ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಮುಕ್ತಾಯವಾಗಿದೆ ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್ ಗೆ ರವಾನೆ ಮಾಡಲಾಗುತ್ತದೆ. ಸಿಎಂ ಯಾರು ಆಗಲಿದ್ದಾರೆ ಎಂಬುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಲಿದ್ದಾರೆ. ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಈ ನಡುವೆ ಶಾಸಕರ ಅಭಿಪ್ರಾಯ ಸಂಗ್ರಹದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT