ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: 24 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಜಪ್ತಿ, ಐವರ ಬಂಧನ

ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ ) ಅಂದಾಜು 24 ಕೋಟಿ ರೂಪಾಯಿ ಮೌಲ್ಯದ 1.2 ಕೋಟಿ ವಿದೇಶಿ ಮೂಲದ ಸಿಗರೇಟ್‌ಗಳನ್ನು ಜಪ್ತಿ ಮಾಡಿದೆ ಮತ್ತು ಅವುಗಳ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ...

ಮುಂಬೈ: ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ ) ಅಂದಾಜು 24 ಕೋಟಿ ರೂಪಾಯಿ ಮೌಲ್ಯದ 1.2 ಕೋಟಿ ವಿದೇಶಿ ಮೂಲದ ಸಿಗರೇಟ್‌ಗಳನ್ನು ಜಪ್ತಿ ಮಾಡಿದೆ ಮತ್ತು ಅವುಗಳ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಆಮದುದಾರ ಸೇರಿದಂತೆ ಐವರನ್ನು ಬಂಧಿಸಿದೆ. 

ಈ ಸಿಗರೇಟ್‌ಗಳು ಭಾರತೀಯ ಮಾನದಂಡಗಳನ್ನು ಅನುಸರಿಸದ ಕಾರಣ ಭಾರತಕ್ಕೆ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಡಿಆರ್‌ಐ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ, ಕಂಟೇನರ್‌ನಿಂದ ನಿಷೇಧಿತ ವಿದೇಶಿ ಸಿಗರೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದನ್ನು ಹೆಚ್ಚಿನ ಕ್ಲಿಯರೆನ್ಸ್‌ಗಾಗಿ ಅರ್ಷಿಯಾ ಮುಕ್ತ ವ್ಯಾಪಾರ ಉಗ್ರಾಣ ವಲಯಕ್ಕೆ(ಎಫ್‌ಟಿಡಬ್ಲ್ಯೂಜೆಡ್) ರವಾನಿಸಲಾಗಿದೆ ಎಂದು ಡಿಆರ್ ಐ ಹೇಳಿದೆ.

ಕಂಟೈನರ್ ಚಲನವಲನದ ಮೇಲೆ ಡಿಆರ್ ಐ ಅಧಿಕಾರಿಗಳು ಪ್ರತ್ಯೇಕ ನಿಗಾ ವಹಿಸಿದ್ದರು.

ಕಂಟೇನರ್ ನವಿ ಮುಂಬೈನ ನ್ಹವಾ ಶೇವಾ ಬಂದರಿನಿಂದ ಹೊರಟ ನಂತರ, ಅದರ ಗಮ್ಯಸ್ಥಾನವನ್ನು ತಲುಪುವ ಮುನ್ನ ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

40 ಅಡಿ ಕಂಟೇನರ್‌ನಲ್ಲಿ ಸಂಪೂರ್ಣ ವಿದೇಶಿ ಮೂಲದ ಸಿಗರೇಟ್‌ಗಳನ್ನು ತುಂಬಿರುವುದು ಕಂಡುಬಂದಿದೆ. ಇವು ಭಾರತೀಯ ಮಾನದಂಡಗಳನ್ನು ಅನುಸರಿಸದ ಕಾರಣ ಭಾರತಕ್ಕೆ ಆಮದು ಮಾಡಿಕೊಳ್ಳಲು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT