ಸಮೀರ್ ವಾಂಖೆಡೆ-ಆರ್ಯನ್ ಖಾನ್ 
ದೇಶ

'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆ

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಪ್ರಕರಣ ದಾಖಲಿಸದಿರಲು ಸಮೀರ್ ವಾಂಖೆಡೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ. ವಾಂಖೆಡೆ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಿಲುಕಿಸದಿರಲು ₹25 ಕೋಟಿ ಲಂಚದ ಬೇಡಿಕೆ ಸಮೀರ್ ವಾಂಖೆಡೆ ವಿರುದ್ಧದ ಆರೋಪವಾಗಿದೆ. ಈ ಲಂಚದ ಮೊತ್ತದಲ್ಲಿ ₹ 50 ಲಕ್ಷ ಪಡೆದಿದ್ದಾರೆ ಎನ್ನಲಾಗಿದೆ. ಆರ್ಯನ್ ಖಾನ್ ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಮತ್ತು ಇತರ ಮೂವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಸಮೀರ್ ವಾಂಖೆಡೆ ಸಹೋದರಿ ಯಾಸ್ಮಿನ್ ವಾಂಖೆಡೆ ಮನೆಯಲ್ಲಿ ₹28,000 ಮತ್ತು ತಂದೆ ಜ್ಞಾನೇಶ್ವರ್ ವಾಂಖೆಡೆ ಅವರ ಮನೆಯಿಂದ ₹28,000ವನ್ನು ಸಿಬಿಐ ವಶಪಡಿಸಿಕೊಂಡಿದೆ. ವಾಂಖೆಡೆ ಅವರ ಮಾವ ಮನೆಯಿಂದ 1800 ರೂ. ವಾಂಖೆಡೆ ಅವರ ಪತ್ನಿ ಮತ್ತು ಮಕ್ಕಳ ಸಮ್ಮುಖದಲ್ಲಿ ಅವರ ನಿವಾಸಿಯನ್ನು 12 ಗಂಟೆಗಳ ಕಾಲ ಹುಡುಕಲಾಯಿತು ಎಂದು ಹೇಳಿಕೆ ನೀಡಿದರು. ದಾಳಿ ವೇಳೆ ಅವರಿಗೆ 23,000 ರೂ. ಮತ್ತು ನಾಲ್ಕು ಆಸ್ತಿ ಪತ್ರಗಳು ಸಿಕ್ಕಿವೆ. ನಾನು ಸೇವೆಗೆ ಸೇರುವ ಮೊದಲು ಈ ಆಸ್ತಿಗಳನ್ನು ಖರೀದಿಸಿದ್ದೆ. ನಾನು ದೇಶಭಕ್ತನಾಗಿರುವುದಕ್ಕಾಗಿ ನನಗೆ ಬಹುಮಾನ ನೀಡಲಾಗುತ್ತಿದೆ ಎಂದು ಹೇಳಿದರು. 

2008ರ ಬ್ಯಾಚ್ IRS ಅಧಿಕಾರಿ ಸಮೀರ್ ವಾಂಖೆಡೆ ಅವರು ಕಾರ್ಡೆಲಿಯಾ ಕ್ರೂಸ್ ಹಡಗಿನ ಮೇಲೆ 2021ರ ಅಕ್ಟೋಬರ್ 2ರಂದು ದಾಳಿ ನಡೆಸಿದರು. ಈ ವೇಳೆ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಹೊಂದಿದ್ದಕ್ಕಾಗಿ ಬಂಧಿಸಿದ್ದರು. ಆರ್ಯನ್ ಖಾನ್ 25 ದಿನ ಜೈಲಿನಲ್ಲಿ ಕಳೆದರು. 2021 ರಲ್ಲಿ, ಎನ್‌ಸಿಬಿ ತನ್ನ ಚಾರ್ಜ್‌ಶೀಟ್‌ನಲ್ಲಿ ಆರ್ಯನ್ ಖಾನ್‌ ಡ್ರಗ್ಸ್ ಸೇವಿಸಿದ್ದಾರೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT