ಅಪರಾಧ 
ದೇಶ

ಮಧ್ಯಪ್ರದೇಶ: ಮೂವರು ಅಪ್ರಾಪ್ತರಿಂದ 12 ವರ್ಷದ ಬಾಲಕನ ಭೀಕರ ಹತ್ಯೆ!

ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.

ಭೋಪಾಲ್: ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.

ಈ ಪೈಕಿ ಅತ್ಯಂತ ಕಿರಿಯ ಬಾಲಕ 11 ವರ್ಷದವನಿದ್ದಾನೆ. ಸೈಕಲ್ ಚೈನ್ ನಿಂದ ಹಲ್ಲೆ ನಡೆಸಿ ತಲೆಯನ್ನು ಕಲ್ಲಿನಿಂದ ಜಜ್ಜಿ, ಹರಿತವಾದ ಆಯುಧದಿಂದ ಬಾಲಕನ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ದೇಹವನ್ನು ಪಾಲಿಥಿನ್ ಬ್ಯಾಗ್ ನಲ್ಲಿ ಹಾಕಿ ಕಸದ ತೊಟ್ಟಿಗೆ ಎಸೆದಿದ್ದಾರೆ. ಆ ಪ್ರದೇಶದಲ್ಲಿ ಮಹಿಳೆಯೊಬ್ಬರು ರಕ್ತ ಸಿಕ್ತವಾದ ಬ್ಯಾಗ್ ನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ, "ಅವರು ಯೋಜಿಸಿ ಅಪರಾಧ ಕೃತ್ಯವನ್ನು ಎಸಗಿದ್ದಾರೆ  ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT