ಕಪಿಲ್ ಸಿಬಲ್ 
ದೇಶ

ಒಂದೇ ಉತ್ಪನ್ನವನ್ನು ಮಾರಲು, ಸುಳ್ಳನ್ನು ಪುನರಾವರ್ತಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ವಾಗ್ದಾಳಿ ನಡೆಸಿದ್ದು, ಒಂದೇ ಉತ್ಪನ್ನವನ್ನು ಮಾರಾಟ ಮಾಡಲು, ಅದೇ ಸುಳ್ಳನ್ನು ಪುನರಾವರ್ತಿಸಲು ಅಥವಾ ಸಾರ್ವಕಾಲಿಕ ಕೋಮು ಉದ್ವಿಘ್ನತೆ ಸೃಷ್ಟಿಸಲು ಸಾಧ್ಯವಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ಸಿಕ್ಕಿರುವ ಪಾಠವಾಗಿದೆ ಎಂದಿದ್ದಾರೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ವಾಗ್ದಾಳಿ ನಡೆಸಿದ್ದು, ಒಂದೇ ಉತ್ಪನ್ನವನ್ನು ಮಾರಾಟ ಮಾಡಲು, ಅದೇ ಸುಳ್ಳನ್ನು ಪುನರಾವರ್ತಿಸಲು ಅಥವಾ ಸಾರ್ವಕಾಲಿಕ ಕೋಮು ಉದ್ವಿಘ್ನತೆ ಸೃಷ್ಟಿಸಲು ಸಾಧ್ಯವಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ಸಿಕ್ಕಿರುವ ಪಾಠವಾಗಿದೆ ಎಂದಿದ್ದಾರೆ.

ಮೇ 10 ರಂದು ನಡೆದ ಚುನಾವಣೆಯಲ್ಲಿ 224 ಸ್ಥಾನಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಕ್ರಮವಾಗಿ 66 ಮತ್ತು 19 ಸ್ಥಾನಗಳಲ್ಲಿ ಜಯ ಸಾಧಿಸಿದವು.

ಟ್ವೀಟ್‌ನಲ್ಲಿ ಸಿಬಲ್, 'ಕರ್ನಾಟಕದ ಚುನಾವಣೆಯ ಫಲಿತಾಂಶದಿಂದ ಸಿಕ್ಕಿದ ಪಾಠವೆಂದರೆ, ಒಂದೇ ಉತ್ಪನ್ನವನ್ನು ಮಾರಾಟ ಮಾಡಲು, ಅದೇ ಸುಳ್ಳನ್ನು ಪುನರಾವರ್ತಿಸಲು, ವಿಷವನ್ನು ಉಗುಳಲು, ಹಿಂದಿನದನ್ನು ನಿಂದಿಸಲು, ಭ್ರಷ್ಟ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಲು ಮತ್ತು ಇತರರನ್ನು ಭ್ರಷ್ಟರೆಂದು ಕರೆಯಲು, ಎಲ್ಲಾ ಕಾಲದಲ್ಲೂ ಕೋಮು ಕಾರ್ಡ್ ಪ್ಲೇ ಮಾಡಲು ನಿಮಗೆ ಸಾಧ್ಯವಿಲ್ಲ' ಎಂದಿದ್ದಾರೆ. 

ಭಾನುವಾರ ಟ್ವೀಟ್ ಮಾಡಿದ್ದ ಸಿಬಲ್, ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಕಾಲ ಮುಕ್ತ, ಪ್ರಾಮಾಣಿಕ ಮತ್ತು ತಾರತಮ್ಯರಹಿತ ಆಡಳಿತ ನಡೆಸಿ ಕಾಂಗ್ರೆಸ್ 'ಜನರ ಹೃದಯವನ್ನು ಗೆಲ್ಲಬೇಕು' ಎಂದು ಒತ್ತಾಯಿಸಿದ್ದರು.

ಯುಪಿಎ 1 ಮತ್ತು 2 ರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಸಿಬಲ್ ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಅವರು ಇತ್ತೀಚೆಗೆ ಅನ್ಯಾಯದ ವಿರುದ್ಧ ಹೋರಾಡುವ ಉದ್ದೇಶದಿಂದ ಚುನಾವಣೇತರ ವೇದಿಕೆ 'ಇನ್ಸಾಫ್' ಅನ್ನು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ಮೊದಲ ಹಂತದ ಚುನಾವಣೆ: NDA ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಹೆಸರು ಪ್ರಸ್ತಾಪಿಸಿದ ಬಿಜೆಪಿ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ನಾಯಕತ್ವ ಬದಲಾವಣೆ ಜಟಾಪಟಿ: 5 ವರ್ಷವೂ ನಾನೇ ಸಿಎಂ ಎಂದು ಡಿಕೆಶಿ ನೋಡಿದಾಕ್ಷಣ ಸ್ವರ ಬದಲಿಸಿದ ಸಿದ್ದು, ಊಹಾಪೋಹ ಶುರು

ಕೂಡ್ಲಿಗಿ ಕಾರ್ಯಕ್ರಮದಲ್ಲಿ CM-DCM ನಡುವಿನ ವೈಮನಸ್ಸು ಬಹಿರಂಗ; ಅಕ್ಕ ಪಕ್ಕ ಕುಳಿತರೂ ಮಾತನಾಡದ ಸಿದ್ದು-ಡಿಕೆಶಿ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ 'ನಮಾಜ್‌': ಅನುಮತಿ ಕೊಟ್ಟವರು ಯಾರು? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ! Video

SCROLL FOR NEXT