ನವದೆಹಲಿ: ಬಾರಾಮುಲ್ಲಾದಲ್ಲಿ ಎಲ್ಒಸಿ ದಾಟಿ ಮುಂದೆ ಬರಲು ಯತ್ನಿಸುತ್ತಿದ್ದ ಓರ್ವ ಅನಾಮಿಕ ಮಹಿಳೆಯನ್ನು ಸೇನಾಪಡೆಗಳು ಹೊಡೆದುರುಳಿಸಿವೆ.
ಕಮಲ್ ಕೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಹಿಳೆ ಗಡಿ ಬೇಲಿಗೆ ಹತ್ತಿರ ಬಂದಿದ್ದರು ಎಂದು ತಿಳಿದುಬಂದಿದೆ.
ಆಕೆಗೆ ಸೈನಿಕರು ಎಚ್ಚರಿಕೆ ನೀಡಿದರು. ಆದರೆ ಆಕೆ ಗಮನ ಹರಿಸಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ನಂತರ ಸೈನಿಕರು ಆಕೆಯ ಮೇಲೆ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಆಕೆ ಸಾವನ್ನಪ್ಪಿದಳು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.