ಕೆಜಿಎಫ್ ಬಾಬು 
ದೇಶ

ಚುನಾವಣೆ ಬಳಿಕ ಚಿಕ್ಕಪೇಟೆ ಮಸೀದಿಗಳಿಂದ 17.30 ಕೋಟಿ ರೂಪಾಯಿಗಳಿಗೆ ಚೆಕ್ ವಾಪಸ್ ಕೇಳಿದ ಕೆಜಿಎಫ್ ಬಾಬು!

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.
 
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಟಿಸಿರುವ ವರದಿಯ ಪ್ರಕಾರ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿರುವ ಕೆಜಿಎಫ್ ಬಾಬು, 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂಪಾಯಿ ಮೌಲ್ಯದ ಚೆಕ್ ಗಳನ್ನು ನೀಡಿದ್ದರು.
 
ಈಗ ಸಮಿತಿಗಳಿಗೆ ತಮ್ಮ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ.  ದಾರುಲ್ ಉಲೂಮ್ ನ ಫತ್ವಾವನ್ನು ಉಲ್ಲೇಖಿಸಿರುವ ಬಾಬು,  ಚುನಾವಣಾ ಸಮಯದಲ್ಲಿ ರಾಜಕಾರಣಿಗಳಿಂದ ಇಂತಹ ದೇಣಿಗೆಗಳನ್ನು ಪಡೆಯುವುದು ಹರಾಮ್ ಆಗಿದೆ ಎಂದು ಸಿದ್ದಾಪುರದ ಟ್ಯಾಂಕ್ ಗಾರ್ಡನ್‌ನಲ್ಲಿರುವ ಮಸೀದಿ-ಇ-ಅತಿಕ್ ಮತ್ತು ಕೃಷ್ಣಪ್ಪ ಗಾರ್ಡನ್‌ನ ಮಸೀದಿ-ಇ-ಹುಸ್ನಾ ಸೇರಿದಂತೆ ಮಸೀದಿಗಳ ಸಮಿತಿಗಳಿಗೆ ಬಾಬು ತಮ್ಮ ಚೆಕ್‌ಗಳನ್ನು ಹಿಂದಿರುಗಿಸುವಂತೆ ಹೇಳಿದ್ದಾರೆ.  ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಚುನಾವಣೆ ವೇಳೆ ಚಿಕ್ಕಪೇಟೆಯ ಸ್ಲಂ ನಿವಾಸಿಗಳಿಗೆ 300 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಪ್ರಚಾರದ ವೇಳೆ ಬಾಬು ಭರವಸೆ ನೀಡಿದ್ದರು. ಚಿಕ್ಕಪೇಟೆ ಅಭಿವೃದ್ಧಿಗೆ 300 ಕೋಟಿ ರೂಪಾಯಿ ವೆಚ್ಚ ಮಾಡುವುದಾಗಿ ಪ್ರಣಾಳಿಕೆಯನ್ನೂ ಮಂಡಿಸಿದ್ದರು. ಬಾಬು ಅವರು 1,621 ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಹೊಂದಿದ್ದಾರೆ ಮತ್ತು 62.32 ಕೋಟಿ ರೂಪಾಯಿಗಳ ಹೊಣೆಗಾರಿಕೆ ಹೊಂದಿದ್ದಾರೆ ಎಂದು ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಮಾವಳ್ಳಿ ಮಸೀದಿಯ ಖಾದಿರ್ ಅಹ್ಮದ್ ಷರೀಫ್ ಮಾತನಾಡಿ, ಬಾಬು ಚಿಕ್ಕಪೇಟೆಯ ಮಸೀದಿಗಳನ್ನು ಗುರಿಯಾಗಿಸಲು ಸ್ಥಳೀಯ ಮೌಲ್ವಿಯಿಂದ ಫತ್ವಾ ಹೊರಡಿಸಿದ್ದಾರೆ ಎಂದು ತೋರುತ್ತದೆ ಎಂದಿದ್ದಾರೆ.

ಬಾಬು ಅವರು ಎಲ್ಲಾ ಮಸೀದಿಗಳಿಗೆ ಆಹ್ವಾನಗಳನ್ನು ಕಳುಹಿಸಿ ಎಸ್‌ಆರ್‌ನಗರದ ಹಕ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಚೆಕ್‌ಗಳನ್ನು ವಿತರಿಸಿದ್ದರು. ಇದು ಅವರ ದೇಣಿಗೆಯಾಗಿದ್ದು, ಮಸೀದಿಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದು ಎಂದು ಬಾಬು ಆ ಸಂದರ್ಭದಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT