ಸಂಗ್ರಹ ಚಿತ್ರ 
ದೇಶ

ರೋಜ್‌ಗಾರ್ ಮೇಳ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರೋಜ್‌ಗಾರ್ ಮೇಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಂಗಳವಾರ ವಾಗ್ದಾಳಿ ನಡೆಸಿದೆ.

ನವದೆಹಲಿ: ರೋಜ್‌ಗಾರ್ ಮೇಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಂಗಳವಾರ ವಾಗ್ದಾಳಿ ನಡೆಸಿದೆ.

ಮೋದಿಯವರು ರೋಜ್ ಗಾರ್ ಮೇಳ ಕಾರ್ಯಕ್ರಮವನ್ನು ವೈಯಕ್ತೀಕರಿಸುವ ಮೂಲಕ ಆಡಳಿತವನ್ನು ನಾಶಪಡಿಸುತ್ತಿದ್ದು, ಕೀಳುಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ಲಕ್ಷ-ಲಕ್ಷ ಉದ್ಯೋಗಗಳನ್ನು ನಾಶಪಡಿಸಿದ್ದು ಮೋದಿಯವರೇ ಎಂಬುದು ಗೊತ್ತಿದೆ ಎಂದು ಆರೋಪಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, 9 ವರ್ಷಗಳಲ್ಲಿ ವಾರ್ಷಿಕ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಮೋದಿಯವರು, ಇದೂವರೆಗೆ 18 ಕೋಟಿ ಯುವಕರ ಕನಸುಗಳನ್ನು ಭಗ್ನಗೊಳಿಸಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ, ಆದರೆ, ಇಂದು ಕೇವಲ 71,000 ನೇಮಕಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವಕರೊಂದಿಗೆ ಮಾಡಲಾಗಿರುವ ಈ ದ್ರೋಹಕ್ಕೆ ಕಾಂಗ್ರೆಸ್ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿ, ಹಿಂದೆಂದೂ ಕಾಣದ ರೀತಿಯಲ್ಲಿ ಆಡಳಿತವನ್ನು ವೈಯಕ್ತೀಕರಿಸುವ ಮೂಲಕ ಮೋದಿಯವರು ಆಡಳಿತವನ್ನು "ನಾಶಗೊಳಿಸಿದ್ದಾರೆಂದು ತಿಳಿಸಿದರು.

ಆಡಳಿತವನ್ನು ವೈಯುಕ್ತಿಕಗೊಳಿಸುವ ಮೂಲಕ ಪ್ರಧಾನಿಯವರು ಆಡಳಿತ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ. ಈ ಹಿಂದೆಂದೂ ಈ ರೀತಿ ನಡೆದಿಲ್ಲ. ತಮ್ಮ ಉದ್ಯೋಗ ಮೇಳಗಳ ಮೂಲಕ ಆಡಳಿತದ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಿದ್ದಾರೆ. ಅವರೇ ಈ ಉದ್ಯೋಗಗಳನ್ನು ಸೃಷ್ಟಿಸಿದ್ದಾರೆ. ಈ ಉದ್ಯೋಗಗಳನ್ನು ಪಡೆಯುವ ಜನರಿಗೆ ಅವರೇ ಹಣ ನೀಡುವಂತೆ ಹೇಳಿಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಉದ್ಯೋಗಾಕಾಂಕ್ಷಿಗಳು ಅವರಿಗೆ ಮಾತ್ರ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಹೇಳುತ್ತಿದ್ದಾರೆ.

ನೋಟು ಅಮಾನ್ಯೀಕರಣ, ಜಿಎಸ್‌ಟಿ, ಎಂಎಸ್‌ಎಂಇಗಳ ನಾಶ ಮತ್ತು ಪಿಎಸ್‌ಯುಗಳ ವಿವೇಚನಾರಹಿತ ಖಾಸಗೀಕರಣದ ಮೂಲಕ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಲಕ್ಷಗಟ್ಟಲೆ ಉದ್ಯೋಗಗಳನ್ನು ನಾಶಪಡಿಸಿದವರು ಇವರೇ ಎಂಬುದು ಯುವಕರಿಗೆ ತಿಳಿದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT