ಉಪ ಪೊಲೀಸ್ ಆಯುಕ್ತ, ದಕ್ಷಿಣ ದೆಹಲಿ, ಚಂದನ್ ಚೌಧರಿ. 
ದೇಶ

ದೆಹಲಿ ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು

ರಾಷ್ಟ್ರ ರಾಜಧಾನಿ ನವದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬೆಳಿಗ್ಗೆ 6.35 ರ ಸುಮಾರಿಗೆ ಬೆದರಿಕೆ ಮೇಲ್ ಬಂದಿದ್ದು, ಕೂಡಲೇ ಶಾಲಾ ಆಡಳಿತ ಮಂಡಳಿಯು ಪೊಲೀಸರಿಗೆ ಮಾಹಿತಿ ನೀಡಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿದೆ ದೌಡಾಯಿಸಿದ್ದು, ಶೋಧನಾ ಕಾರ್ಯ ನಡೆಸಿದ್ದಾರೆ. ಆದರೆ, ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಥುರಾ ರಸ್ತೆಯಲ್ಲಿರುವ ‘ದಿ ಡೆಲ್ಲಿ ಪಬ್ಲಿಕ್ ಸ್ಕೂಲ್’ (ಡಿಪಿಎಸ್) ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮೇಲ್ ಬಂದಿತ್ತು. ಇದಾದ ಹದಿನೈದು ದಿನಗಳ ಬಳಿಕ ಮತ್ತೊಂದು ಶಾಲೆಗೆ ಬೆದರಿಕೆ ಮೇಲ್ ಬಂದಿದೆ.

ಕಳೆದ ತಿಂಗಳು ಕೂಡ ‘ದಿ ಇಂಡಿಯನ್ ಸ್ಕೂಲ್’ ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಇತರ ಏಜೆನ್ಸಿಗಳು ಸ್ಫೋಟಕ ವಸ್ತುವಿಗಾಗಿ ಶಾಲಾ ಆವರಣದಲ್ಲಿ ಶೋಧನೆ ನಡೆಸಿತ್ತು. ಆದರೆ, ನಂತರ ಬೆದರಿಕೆ ಮೇಲ್ ಆಗಿತ್ತು ಎಂಬುದು ತಿಳಿದುಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT