ಮುಖ್ತಾರ್ ಅನ್ಸಾರಿ 
ದೇಶ

2009ರ ಕೊಲೆ ಯತ್ನ ಪ್ರಕರಣ: ಮುಕ್ತಾರ್ ಅನ್ಸಾರಿ ಖುಲಾಸೆಗೊಳಿಸಿದ ಕೋರ್ಟ್

2009 ರ ಕೊಲೆ ಯತ್ನ ಪ್ರಕರಣದಲ್ಲಿ ಉತ್ತರ ಪ್ರದೇಶದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರನ್ನು ಗಾಜಿಪುರದ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ.

ಗಾಜಿಪುರ: 2009 ರ ಕೊಲೆ ಯತ್ನ ಪ್ರಕರಣದಲ್ಲಿ ಉತ್ತರ ಪ್ರದೇಶದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರನ್ನು ಗಾಜಿಪುರದ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ.

ಮೊಹಮ್ಮದಾಬಾದ್ ಪೊಲೀಸ್ ಠಾಣೆಯ ಮೀರ್ ಹಸನ್ ಕೊಲೆ ಯತ್ನ(ಭಾರತೀಯ ದಂಡ ಸಂಹಿತೆ ಸೆಕ್ಷನ್ 307) ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಲಯ/ಮೊದಲ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ದುರ್ಗೇಶ್ ಅವರು ಆರೋಪಿ ಮುಕ್ತಾರ್ ಅನ್ಸಾರಿ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ಸರ್ಕಾರಿ ವಕೀಲ ನೀರಜ್ ಕುಮಾರ್ ಶ್ರೀವಾಸ್ತವ್ ಹೇಳಿದ್ದಾರೆ.

ಪ್ರಸ್ತುತ ಬಂಡಾ ಜೈಲಿನಲ್ಲಿರುವ ಅನ್ಸಾರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಯಲ್ಲಿ ಭಾಗವಹಿಸಿದ್ದರು.

ಆದಾಗ್ಯೂ, ಅನ್ಸಾರಿಯು ಇತರ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವುದರಿಂದ ಮತ್ತು ಇತ್ತೀಚೆಗೆ ಒಂದು ಪ್ರಕರಣದಲ್ಲಿ ಅಪರಾಧಿಯಾಗಿರುವ ಕಾರಣ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ ಎಂದು ಶ್ರೀವಾಸ್ತವ್ ತಿಳಿಸಿದ್ದಾರೆ.

"2009 ರಲ್ಲಿ ಮೀರ್ ಹಸನ್ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದರು. ದಾಳಿಕೋರರಲ್ಲಿ ಒಬ್ಬರಾದ ಸೋನು ಯಾದವ್ ನಂತರ ಹಸನ್‌ಗೆ ಬೆದರಿಕೆ ಹಾಕಿದ್ದರು ಮತ್ತು ಅನ್ಸಾರಿ ಅವರನ್ನು ಜೈಲಿನಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಯಾದವ್ ಮತ್ತು ಅನ್ಸಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು".

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT