ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಗೋದಾಮಿನಲ್ಲಿ ಬೆಂಕಿ ಅವಘಡ, 8 ಕೋಟಿ ರೂ. ಮೌಲ್ಯದ ಔಷಧಗಳು ನಾಶ

ಕೇರಳದ  ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.

ಕೊಲ್ಲಂ: ಕೇರಳದ  ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.

ಕೊಲ್ಲಂನಲ್ಲಿರುವ ಕೆಎಂಎಸ್‌ಸಿಎಲ್‌ನ ಜಿಲ್ಲಾ ಔಷಧ ಗೋದಾಮಿನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಇದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿ  ಪೂರೈಕೆಯ ಪ್ರಮುಖ ಕೇಂದ್ರವಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. "ಬೆಂಕಿಯಿಂದ ಒಟ್ಟು 8 ಕೋಟಿ ನಷ್ಟ ಅಂದಾಜಿಸಲಾಗಿದೆ. ಆದರೆ ಔಷಧಿಗಳಿಗೆ ವಿಮೆ ಮಾಡಿರುವುದರಿಂದ ನಿಗಮಕ್ಕೆ ಹೆಚ್ಚು ನಷ್ಟ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT