ದೆಹಲಿ ಹೈಕೋರ್ಟ್ 
ದೇಶ

55 ವರ್ಷದ ಅನಧಿಕೃತ ಕಾಳಿ ಮಂದಿರ ಧ್ವಂಸ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಇಲ್ಲಿನ ಮಾಯಾಪುರಿ ಚೌಕ್‌ನಲ್ಲಿ ಅನಧಿಕೃತ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿರುವ 55 ವರ್ಷಗಳಷ್ಟು ಹಳೆಯದಾದ ಕಾಳಿ ದೇವಸ್ಥಾನವನ್ನು ಕೆಡವಲು ಏಕಪೀಠ ಮಧ್ಯಪ್ರವೇಶಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನವದೆಹಲಿ: ಇಲ್ಲಿನ ಮಾಯಾಪುರಿ ಚೌಕ್‌ನಲ್ಲಿ ಅನಧಿಕೃತ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿರುವ 55 ವರ್ಷಗಳಷ್ಟು ಹಳೆಯದಾದ ಕಾಳಿ ದೇವಸ್ಥಾನವನ್ನು ಕೆಡವಲು ಏಕಪೀಠ ಮಧ್ಯಪ್ರವೇಶಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ವಿಗ್ರಹಗಳು ಮತ್ತು ಇತರ ಧಾರ್ಮಿಕ ವಸ್ತುಗಳನ್ನು ದೇವಾಲಯದಿಂದ ಇತರ ದೇವಾಲಯಗಳಿಗೆ ಸ್ಥಳಾಂತರಿಸುವ ಸಮಯವನ್ನು ವಿಸ್ತರಿಸಲು ನಿರಾಕರಿಸಿತು. ಹೆಚ್ಚು ಸಮಯವಿಲ್ಲ. ಕ್ಷಮಿಸಿ, ನಾವು ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ಪೀಠ ಹೇಳಿದೆ.

ಮೇ 11ರಂದು ಏಕಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದೇಗುಲದ ಅರ್ಚಕ ಹಾಗೂ ಉಸ್ತುವಾರಿ ದುರ್ಗಾ ಪಿ ಮಿಶ್ರಾ ಅವರು ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಪೀಠ ಈ ಆದೇಶ ನೀಡಿದೆ.

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಏಪ್ರಿಲ್ 25ರಂದು ಹೊರಡಿಸಿದ ನೋಟಿಸ್ ಮತ್ತು ಕಾಳಿ ಮಾತಾ ಮಂದಿರವನ್ನು ಕೆಡವಲು ನಿರ್ಧರಿಸಿದ ಧಾರ್ಮಿಕ ಸಮಿತಿಯ ಸಭೆಯ ನಡಾವಳಿಗಳನ್ನು ರದ್ದುಗೊಳಿಸುವಂತೆ ಮಿಶ್ರಾ ಕೋರಿದ್ದರು.

ಮಿಶ್ರಾ ಪರ ವಾದ ಮಂಡಿಸಿದ ವಕೀಲ ಸುನಿಲ್ ಫರ್ನಾಂಡಿಸ್, ಏಕಪೀಠ ನ್ಯಾಯಾಧೀಶರು ಈ ವಿಷಯದಲ್ಲಿ ಸರಿಯಾದ ವಿಚಾರಣೆ ನಡೆಸಿಲ್ಲ ಎಂದು ವಾದಿಸಿದರು. ಆದರೆ ದೆಹಲಿ ಹೈಕೋರ್ಟ್ ಈ ಯಾವ ವಾದಗಳನ್ನು ಪರಿಗಣಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT