ಶೋಧ ಕಾರ್ಯದಲ್ಲಿ ತೊಡಗಿರುವ ನೌಕಾಪಡೆ ವಿಮಾನ 
ದೇಶ

ಹಿಂದೂ ಮಹಾಸಾಗರದಲ್ಲಿ ಮುಳುಗಿದ ಹಡಗು: ರಕ್ಷಣೆಗೆ ಧಾವಿಸಿದ ಭಾರತಕ್ಕೆ ಚೀನಾ ಶ್ಲಾಘನೆ

ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ.

ನವದೆಹಲಿ: ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ.

ಹೌದು.. ಮಧ್ಯ ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಗೊಂಡ ಚೀನಾದ ಮೀನುಗಾರಿಕಾ ಹಡಗಿನಲ್ಲಿದ್ದ 39 ಜನರ ರಕ್ಷಣೆಗೆ ಧಾವಿಸಿದ ಭಾರತದ ನಡೆಯನ್ನು ಚೀನಾ ಪ್ರಶಂಸಿಸಿದೆ. ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ಈ ಬಗ್ಗೆ ಟ್ವೀಟ್ ಮೂಲಕ ಈ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದು, ‘ಭಾರತದಿಂದ ಸಿಕ್ಕ ಸಕಾಲಿಕ ಸಹಾಯವನ್ನು ನಿಜಕ್ಕೂ ಪ್ರಶಂಸಿಸುತ್ತೇವೆ ಎಂದು ಹೇಳಿದೆ.

ಚೀನಾದ ಮೀನುಗಾರಿಕಾ ಹಡಗಿನ ಹುಡುಕಾಟ ಮತ್ತು ರಕ್ಷಣೆಗಾಗಿ P-8I ಕಡಲ ಗಸ್ತು ವಿಮಾನವನ್ನು ಭಾರತೀಯ ಸೇನೆ ನಿಯೋಜಿಸಿದೆ. ಈಗಾಗಲೇ ನೌಕಾಪಡೆಯ ಸಾಕಷ್ಟು ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಮೀನುಗಾರಿಕಾ ಹಡಗಿನಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಭಾರತೀಯ ನೌಕಾಪಡೆ ಟ್ವೀಟ್‌ ಮಾಡಿತ್ತು. ಈ ಟ್ವೀಟ್‌ ಅನ್ನು ರೀ ಟ್ವೀಟ್‌ ಮಾಡಿಕೊಂಡಿರುವ ರಾಯಭಾರ ಕಚೇರಿ ಪ್ರಶಂಸೆ ವ್ಯಕ್ತಪಡಿಸಿದೆ.

ಇನ್ನೊಂದೆಡೆ, ಮುಳುಗಡೆಯಾದ ಮೀನುಗಾರಿಕಾ ಹಡಗು ‘ಲುಪೆಂಗ್ ಯುವಾನ್ಯು 028’ನಲ್ಲಿದ್ದ 39 ಜನರ ಪೈಕಿ ಇಬ್ಬರ ಸಾವನ್ನು ಚೀನಾದ ಸಾರಿಗೆ ಇಲಾಖೆ ಗುರುವಾರ ದೃಢಪಡಿಸಿದೆ. ಹಡಗಿನಲ್ಲಿ 17 ಚೀನೀಯರು, ಇಂಡೋನೇಷಿಯಾದ 17 ಮಂದಿ ಮತ್ತು ಐದು ಫಿಲಿಪೈನ್ ನಾವಿಕರು ಸೇರಿದಂತೆ 39 ಜನರಿದ್ದರು ಎನ್ನಲಾಗಿದೆ.

ಚೀನಾದ ನೌಕಾಪಡೆಯ ಮೂರು ಹಡಗುಗಳು ಮತ್ತು ಒಂದು ವಿದೇಶಿ ಹಡಗು ಸೇರಿದಂತೆ 10 ಹಡಗುಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಮತ್ತಷ್ಟು ಹಡಗುಗಳು ಆಗಮಿಸಲಿವೆ ಎಂದು ಸಚಿವಾಲಯ ತಿಳಿಸಿದೆ ಎಂದು ಸರ್ಕಾರಿ ವಾಹಿನಿ ‘ಕ್ಸಿನ್ಹುವಾ’ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!