ರಕ್ಷಣೆಗೊಳಗಾಗಿರುವ ಪ್ರವಾಸಿಗರು. 
ದೇಶ

ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆ

ಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ.

ನವದೆಹಲಿ: ಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ.

ಸಿಕ್ಕಿಂನ ಲಾಚುಂಗ್ ಮತ್ತು ಲಾಚೆನ್ ಕಣಿವೆಗೆ ಪ್ರಯಾಣಿಸುತ್ತಿದ್ದ 500 ಪ್ರವಾಸಿಗರು ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಪ್ರವಾಸಿಗರು ಭೂಕುಸಿತಗಳು ಮತ್ತು ರಸ್ತೆ ತಡೆಗಳಿಂದಾಗಿ ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದರು.

ಜೆನ್ ಎ ಲಾಚೆನ್, ಲಾಚುಂಗ್ ಮತ್ತು ಚುಂಗ್‌ಥಾಂಗ್‌ನಲ್ಲಿ ಭಾರಿ ಧಾರಾಕಾರ ಮಳೆಯಾಗಿದೆ. ತ್ರಿಶಕ್ತಿ ಕಾರ್ಪ್ಸ್, ಭಾರತೀಯ ಸೇನೆಯ ಪಡೆಗಳು ಸಿಲುಕಿಕೊಂಡ ಪ್ರವಾಸಿಗರ ರಕ್ಷಣೆಗಾಗಿ ಕಾರ್ಯಾಚರಣೆಗೆ ಇಳಿದು ಪ್ರವಾಸಿಗರನ್ನು ಸುರಕ್ಷಿತವಾಗಿ ರಕ್ಷಿಸಿದೆ.

ರಕ್ಷಣೆಗೊಂಡ 500 ಮಂದಿಯ ಪೈಕಿ 216 ಪುರುಷರು, 113 ಮಹಿಳೆಯರು ಮತ್ತು 54 ಮಕ್ಕಳು ಸೇರಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಕ್ಷಣೆಗೊಂಡ ಪ್ರವಾಸಿಗರನ್ನು ಮೂರು ವಿಭಿನ್ನ ಸೇನಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ಅವರಿಗೆ ಬಿಸಿ ಊಟ ಮತ್ತು ಬೆಚ್ಚಗಿನ ಬಟ್ಟೆಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ರಾತ್ರಿ ಪ್ರವಾಸಿಗರಿಗೆ ವಸತಿ ಕಲ್ಪಿಸಲು ಸೈನಿಕರು ತಮ್ಮ ಬ್ಯಾರಕ್‌ಗಳನ್ನು ಖಾಲಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರವಾಸಿಗರ ಚಿಕಿತ್ಸೆಗಾಗಿ ಮೂರು ವೈದ್ಯಕೀಯ ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಪ್ರವಾಸಿಗರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಸೇನಾಪಡೆಗಳ ತ್ವರಿತ ಪ್ರತಿಕ್ರಿಯೆಯಿಂದ ದುರ್ಘಟನೆಯೊಂದು ತಪ್ಪಿದಂತಾಗಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT