ಎಂ.ಕೆ. ಸ್ಟಾಲಿನ್ 
ದೇಶ

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಚೆನ್ನೈ: 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದು, '500 ಅನುಮಾನಗಳು, 1,000 ನಿಗೂಢಗಳು ಮತ್ತು 2,000 ಪ್ರಮಾದಗಳು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ದಯನೀಯ ವೈಫಲ್ಯವನ್ನು ಮುಚ್ಚಿಹಾಕಲು ಇದೊಂದು ತಂತ್ರ' ಎಂದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಸ್ಟಾಲಿನ್, ಬಿಜೆಪಿಯನ್ನು ದ್ರಾವಿಡ ಭೂದೃಶ್ಯದಿಂದ ನಿರ್ನಾಮ ಮಾಡಲಾಗಿದೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ನೋಟು ಅಮಾನ್ಯೀಕರಣದ ಪ್ರಯತ್ನ ಇದಾಗಿದೆ ಎಂದು ಅವರು ಹೇಳಿದರು.

ಇದಕ್ಕೂ ಒಂದು ದಿನ ಮೊದಲು ಸಂಸದೆ ಮತ್ತು ಡಿಎಂಕೆ ಉಪ ಕಾರ್ಯದರ್ಶಿ ಕನಿಮೊಳಿ ಅವರು 2,000 ರೂಪಾಯಿ ನೋಟಿನ ಫೊಟೋವನ್ನು ಪೋಸ್ಟ್ ಮಾಡಿ, 'ಆತನೇ ಸೃಷ್ಟಿಸುವವನು, ಆತನೇ ನಾಶಪಡಿಸುವವನು' ಎಂದು ಟ್ವೀಟ್ ಮಾಡಿದ್ದರು.

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂಪಾಯಿ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು ಮತ್ತು ಅಸ್ತಿತ್ವದಲ್ಲಿರುವ ನೋಟುಗಳನ್ನು ಸೆಪ್ಟೆಂಬರ್ 30 ರವರೆಗೆ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಇತರ ಕರೆನ್ಸಿ ನೋಟುಗಳಿಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT