ಪ್ರಾತಿನಿಧಿಕ ಚಿತ್ರ 
ದೇಶ

ವಿವಾದದ ಬಳಿಕ ಮುಸ್ಲಿಂ ಯುವಕನೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ರದ್ದು ಮಾಡಿದ ಬಿಜೆಪಿ ನಾಯಕ!

ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ ಎಂಬ  ಲಗ್ನ ಪತ್ರಿಕೆ ಫೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ವಿವಾದಕ್ಕೆ ಕಾರಣವಾಯಿತು. ಬಳಿಕ, ಬಿಜೆಪಿ ನಾಯಕ ಯಶಪಾಲ್ ಬೇನಾಮ್ ಅವರು ಶನಿವಾರ ಉತ್ತರಾಖಂಡ್‌ನ ಪೌರಿ ಗರ್ವಾಲ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗಿನ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ 'ಪರಸ್ಪರ ಒಪ್ಪಿಗೆ'ಯೊಂದಿಗ

ಪೌರಿ ಗರ್ವಾಲ್: ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ ಎಂಬ  ಲಗ್ನ ಪತ್ರಿಕೆ ಫೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ವಿವಾದಕ್ಕೆ ಕಾರಣವಾಯಿತು. ಇದಾದ ಬಳಿಕ, ಬಿಜೆಪಿ ನಾಯಕ ಯಶಪಾಲ್ ಬೇನಾಮ್ ಅವರು ಶನಿವಾರ ಉತ್ತರಾಖಂಡ್‌ನ ಪೌರಿ ಗರ್ವಾಲ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗಿನ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ 'ಪರಸ್ಪರ ಒಪ್ಪಿಗೆ'ಯೊಂದಿಗೆ ರದ್ದುಗೊಳಿಸಿದ್ದಾರೆ.

ಯಶಪಾಲ್ ಬೇನಾಮ್

ಬಿಜೆಪಿ ಮುಖಂಡರ ಮಗಳ ಮದುವೆ ಮೇ 28ರಂದು ನಡೆಯಬೇಕಿತ್ತು. ಈಗ ಮೇ 28 ರಂದು ನಡೆಯಲಿರುವ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ನಾಯಕ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿರಲಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಮದುವೆಗೆ ನಿರ್ಧರಿಸಲಾಯಿತು. ಆದರೆ, ಕೆಲವು ವಿಷಯಗಳು ಮುನ್ನೆಲೆಗೆ ಬಂದ ನಂತರ ವಿವಾಹವನ್ನು ರದ್ದುಗೊಳಿಸಲಾಯಿತು ಎಂದು ಬೇನಾಮ್ ಹೇಳಿದರು.

'ನನ್ನ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗಲು ಹೊರಟಿದ್ದಳು. ಮಕ್ಕಳ ಸಂತೋಷ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎರಡೂ ಕುಟುಂಬಗಳು ಅವರಿಗೆ ಮದುವೆ ಮಾಡಲು ನಿರ್ಧರಿಸಿದ್ದವು. ಅದಕ್ಕಾಗಿ ಕಾರ್ಡ್‌ಗಳನ್ನು ಸಹ ಮುದ್ರಿಸಿ ಹಂಚಲಾಗಿತ್ತು. ಆದರೆ, ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿ, ಹಲವು ರೀತಿಯ ವಿಷಯಗಳು ಮುನ್ನೆಲೆಗೆ ಬಂದಿವೆ' ಎಂದು ಹೇಳಿದರು.

ವಿವಾದ ಭುಗಿಲೆದ್ದ ನಂತರ, ಪರಸ್ಪರ ಒಪ್ಪಿಗೆಯೊಂದಿಗೆ, ಎರಡೂ ಕುಟುಂಬಗಳು ಸದ್ಯಕ್ಕೆ ಮದುವೆಯ ವಿಧಿವಿಧಾನಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ಆದರೆ, ಅದೇ ಯುವಕನೊಂದಿಗೆ ಮಗಳ ವಿವಾಹದ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಮಾತುಕತೆ ನಡೆಸಿ ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel