ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್, ಸಂಸದ ಸಂಜಯ್ ಸಿಂಗ್ ಗೆ ಸಮನ್ಸ್ ಜಾರಿ!

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಅಹಮದಾಬಾದ್‌ನ ನ್ಯಾಯಾಲಯ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಅಹಮದಾಬಾದ್‌ನ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಇದರಲ್ಲಿ ಇಬ್ಬರಿಗೂ ಜೂನ್ 7ರಂದು ಹಾಜರಾಗುವಂತೆ ಸೂಚಿಸಲಾಗಿದೆ.

ಮೇ 23ರಂದು ತಮ್ಮ ಮುಂದೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಜೆ.ಪಾಂಚಾಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ 'ವ್ಯಂಗ್ಯ' ಮತ್ತು 'ಅವಹೇಳನಕಾರಿ' ಹೇಳಿಕೆಗಳಿಗಾಗಿ ಗುಜರಾತ್ ವಿಶ್ವವಿದ್ಯಾನಿಲಯದ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರಿಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದನ್ನು ಗಮನಿಸಬಹುದು.

ಎಎಪಿಯ ಗುಜರಾತ್ ಘಟಕದ ಕಾನೂನು ವಿಭಾಗದ ಮುಖ್ಯಸ್ಥ ಪ್ರಣಬ್ ಠಕ್ಕರ್ ಅವರು ಸೋಮವಾರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ನ್ಯಾಯಾಲಯ ನೀಡಿದ ಸಮನ್ಸ್‌ಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ಗುಜರಾತ್ ವಿಶ್ವವಿದ್ಯಾನಿಲಯದ ವಕೀಲರು ಮಂಗಳವಾರ ಈ ವಿಷಯದ ಬಗ್ಗೆ ಹೊಸ ನ್ಯಾಯಾಧೀಶ ಎಸ್‌ಜೆ ಪಾಂಚಾಲ್ ಅವರಿಗೆ ಮಾಹಿತಿ ನೀಡಿದರು ಮತ್ತು ಅವರ ಹಿಂದಿನವರು ಆರೋಪಿಗಳಿಗೆ ಮೇ 23ರಂದು ನ್ಯಾಯಾಲಯಕ್ಕೆ ಹಾಜರಾಗಲು ಏಪ್ರಿಲ್ 15ರಂದು ನೋಟಿಸ್ ನೀಡಿದ್ದರು ಎಂದು ಹೇಳಿದರು. ನ್ಯಾಯಾಲಯಕ್ಕೆ ಯಾರೂ ಹಾಜರಾಗದ ಕಾರಣ, ಅವರು ಸಮನ್ಸ್ ಸ್ವೀಕರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನು ನೋಡುವಂತೆ ನ್ಯಾಯಾಧೀಶರು ಸಿಬ್ಬಂದಿಗೆ ಸೂಚಿಸಿದರು. ನಂತರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ನೀಡುವಂತೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT