ಮನೀಶ್ ಸಿಸೋಡಿಯಾ 
ದೇಶ

ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾ

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

ಜೈಲಿನೊಳಗೆ ಸಿಸೋಡಿಯಾ ಅವರಿಗೆ ಪುಸ್ತಕಗಳ ಜೊತೆಗೆ ಕುರ್ಚಿ ಮತ್ತು ಟೇಬಲ್ ನೀಡುವುದನ್ನು ಪರಿಗಣಿಸುವಂತೆ ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸೂಚಿಸಿದರು.

ಸಿಸೋಡಿಯಾ ಅವರನ್ನು ನ್ಯಾಯಾಲಯದಿಂದ ಹೊರಗೆ ಕರೆತರುವಾಗ, ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಉಲ್ಲೇಖಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಗೆ 'ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮೋದಿ ತುಂಬಾ ದುರಹಂಕಾರಿಯಾಗಿದ್ದಾರೆ' ಎಂದು ಹೇಳಿದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರು ಸಿಬಿಐ ಮತ್ತು ಇ.ಡಿ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video