ಮನೀಶ್ ಸಿಸೋಡಿಯಾ 
ದೇಶ

ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾ

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

ಜೈಲಿನೊಳಗೆ ಸಿಸೋಡಿಯಾ ಅವರಿಗೆ ಪುಸ್ತಕಗಳ ಜೊತೆಗೆ ಕುರ್ಚಿ ಮತ್ತು ಟೇಬಲ್ ನೀಡುವುದನ್ನು ಪರಿಗಣಿಸುವಂತೆ ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸೂಚಿಸಿದರು.

ಸಿಸೋಡಿಯಾ ಅವರನ್ನು ನ್ಯಾಯಾಲಯದಿಂದ ಹೊರಗೆ ಕರೆತರುವಾಗ, ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಉಲ್ಲೇಖಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಗೆ 'ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮೋದಿ ತುಂಬಾ ದುರಹಂಕಾರಿಯಾಗಿದ್ದಾರೆ' ಎಂದು ಹೇಳಿದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರು ಸಿಬಿಐ ಮತ್ತು ಇ.ಡಿ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT